Tamil Nadu : 2020ರಲ್ಲಿ ನಡೆದ ತಂದೆ-ಮಗನ ಕಸ್ಟೋಡಿಯಲ್ ಡೆತ್ ಪ್ರಕರಣದಲ್ಲಿ ಮಧುರೈ ನ್ಯಾಯಾಲಯ 9 ಪೊಲೀಸರಿಗೆ ಮರಣದಂಡನೆ ವಿಧಿಸಿದೆ. ಪ್ರಕರಣದ ಸಂಪೂರ್ಣ ವಿವರ ಮತ್ತು ನ್ಯಾಯಾಲಯದ ತೀರ್ಪು ಇಲ್ಲಿದೆ…

ದೇಶದ ಗಮನ ಸೆಳೆದಿದ್ದ ತಂದೆ ಮತ್ತು ಮಗನ ಲಾಕಪ್ ಡೆತ್ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. Tamil Nadu 9 ಮಂದಿ ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲಾ ನ್ಯಾಯಾಲಯ ಕಠಿಣ ಕ್ರಮ ಕೈಗೊಂಡಿದೆ. ನ್ಯಾಯಾಧೀಶರು ಈ ಪ್ರಕರಣವನ್ನು “ಅಪರೂಪದಲ್ಲಿ ಅಪರೂಪ” ಎಂದು ಉಲ್ಲೇಖಿಸಿರುವುದು ವಿಶೇಷವಾಗಿದೆ.
ಪ್ರಕರಣದ ಹಿನ್ನೆಲೆ: ಲಾಕ್ಡೌನ್ ಸಮಯದಲ್ಲಿ ಬಂಧನ
2020ರ ಜೂನ್ 19ರಂದು ತಮಿಳುನಾಡಿನ ಸಾಥನ್ಕುಲಂ ಪ್ರದೇಶದಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಪೊಲೀಸರು ಬಂಧಿಸಿದ್ದರು.
ಲಾಕ್ಡೌನ್ ನಿಯಮಾವಳಿಗಳ ಪ್ರಕಾರ ಅನುಮತಿ ನೀಡಿದ ಅವಧಿಗಿಂತ 45 ನಿಮಿಷ ಹೆಚ್ಚು ಅಂಗಡಿ ತೆರೆದಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿತ್ತು.
ಆದರೆ, ಬಂಧನದ ನಂತರ ಇಬ್ಬರನ್ನೂ ಸಾಥನ್ಕುಲಂ ಪೊಲೀಸ್ ಠಾಣೆಗೆ ಕರೆತಂದು ರಾತ್ರಿಯಿಡೀ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಹೊರಬಂದಿದ್ದವು.
ಅಲ್ಲದೆ, ತಮ್ಮದೇ ರಕ್ತವನ್ನು ಬಟ್ಟೆಗಳಿಂದ ನೆಲದಿಂದ ಒರೆಸುವಂತೆ ಒತ್ತಾಯಿಸಲಾಗಿತ್ತು ಎಂಬ ಆರೋಪ ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿತು.
MUST READ : Gold & Silver Rate : ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ..
ಬಂಧನದ ನಂತರ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಆದರೆ, ಕೋವಿಡ್ ಸಮಯವಾಗಿದ್ದರಿಂದ ಅವರ ಮೇಲಿನ ಹಲ್ಲೆಯನ್ನು ತಕ್ಷಣ ಪರಿಶೀಲಿಸಲು ಸಾಧ್ಯವಾಗಿರಲಿಲ್ಲ. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಇದಾದ ಮೂರು ದಿನಗಳೊಳಗೆ ಇಬ್ಬರೂ ಸಾವನ್ನಪ್ಪಿದರು. ವೈದ್ಯಕೀಯ ವರದಿಯ ಪ್ರಕಾರ , ಜಯರಾಜ್ಗೆ– 17 ಗಾಯಗಳು , ಬೆನಿಕ್ಸ್ಗೆ – 13 ಗಾಯಗಳು , ಗುದನಾಳದ ರಕ್ತಸ್ರಾವ ಸೇರಿದಂತೆ ಗಂಭೀರ ಗಾಯಗಳು.
ಈ ಘಟನೆ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು ಮತ್ತು ಮಾನವ ಹಕ್ಕುಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿತು.
CBI ತನಿಖೆ ಮತ್ತು ಪ್ರಮುಖ ಸಾಕ್ಷಿಗಳು
ಈ ಪ್ರಕರಣದ ಗಂಭೀರತೆಯನ್ನು ಗಮನಿಸಿ, ಮದ್ರಾಸ್ ಹೈಕೋರ್ಟ್ ನಿರ್ದೇಶನದಂತೆ ಪ್ರಕರಣದ ತನಿಖೆಯನ್ನು ಸಿಬಿಐ (CBI) ಕೈಗೆತ್ತಿಕೊಂಡಿತ್ತು. ತನಿಖೆಯ ವೇಳೆ 9 ಮಂದಿ ಪೊಲೀಸರನ್ನು ಬಂಧಿಸಲಾಗಿತ್ತು.
ಬಂಧಿತರಲ್ಲಿ ಒಬ್ಬ ಇನ್ಸ್ಪೆಕ್ಟರ್ , ಇಬ್ಬರು ಸಬ್-ಇನ್ಸ್ಪೆಕ್ಟರ್ಗಳು ,ಉಳಿದವರು ಕಾನ್ಸ್ಟೆಬಲ್ಗಳು , ತನಿಖೆಯ ಸಮಯದಲ್ಲಿ, ಮಹಿಳಾ ಕಾನ್ಸ್ಟೆಬಲ್ ಒಬ್ಬರು ಠಾಣೆಯಲ್ಲಿ ನಡೆದ ಹಲ್ಲೆ ಕುರಿತು ಮಹತ್ವದ ಮಾಹಿತಿ ನೀಡಿದ್ದರು.
ಅಲ್ಲದೆ, ಟೇಬಲ್ಗಳು ಮತ್ತು ಲಾಠಿಗಳಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದು ಪ್ರಮುಖ ಸಾಕ್ಷಿಯಾಗಿ ಪರಿಣಮಿಸಿತು.
ಇದರ ಜೊತೆಗೆ, ಠಾಣೆಯ CCTV ವಿಡಿಯೋಗಳು ಸ್ವಯಂಚಾಲಿತವಾಗಿ ಡಿಲೀಟ್ ಆಗಿರುವುದು ತನಿಖೆಗೆ ಸವಾಲು ತಂದಿದ್ದರೂ, ಅಧಿಕಾರಿಗಳು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿದ್ದರು.
ನ್ಯಾಯಾಲಯದ ತೀರ್ಪು
ಕೊನೆಗೆ, ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಮಧುರೈ ಜಿಲ್ಲಾ ನ್ಯಾಯಾಲಯ ಈ ಪ್ರಕರಣವನ್ನು ಅತ್ಯಂತ ಗಂಭೀರವಾದದ್ದು ಎಂದು ಪರಿಗಣಿಸಿ, 9 ಮಂದಿ ಪೊಲೀಸರಿಗೆ ಮರಣದಂಡನೆ ವಿಧಿಸಿದೆ. ಈ ತೀರ್ಪು ದೇಶದ ನ್ಯಾಯಾಂಗ ವ್ಯವಸ್ಥೆಯ ಕಠಿಣ ನಿಲುವನ್ನು ಪ್ರತಿಬಿಂಬಿಸುತ್ತದೆ.
MUST WATCH : ಶಿರಾದಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಆಚರಣೆ ಎರಡು ಕಡೆ ಪ್ರತ್ಯೇಕವಾಗಿ ಕಾರ್ಯಕ್ರಮ ಆಯೋಜನೆ




