Shreyas Iyer : ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಗಂಭೀರ ಪರಿಸ್ಥಿತಿಯಲ್ಲಿ ಸಿಡ್ನಿಯ ಐಸಿಯುನಲ್ಲಿ ದಾಖಲಿಸಲಾಗಿದೆ. ಪಂದ್ಯದ ವೇಳೆ ಡೈವಿಂಗ್ ಕ್ಯಾಚ್ ಹಿಡಿಯುವ ಸಮಯದಲ್ಲಿ ಎಡ ಪಕ್ಕೆಲುಬುಗಳಿಗೆ ತೀವ್ರ ಗಾಯ ಹೊಡೆಯಲಾಗಿದೆ.
ಅಯ್ಯರ್ಗೆ ಹೊಟ್ಟೆಯ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವ ಉಂಟಾಗಿದ್ದು, ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವರದಿಗಳ ಪ್ರಕಾರ, ಅವರು ಇನ್ನೂ ಕನಿಷ್ಠ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗಿರುವುದು ನಿರೀಕ್ಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಕ್ತಸ್ರಾವ ಕಡಿಮೆಯಾಗದಿದ್ದರೆ, ಆಸ್ಪತ್ರೆ ವಾಸ್ತವ್ಯವನ್ನು ವಿಸ್ತರಿಸಬಹುದು.
ಇದನ್ನು ಓದಿ : ಮುನಿಯಪ್ಪ CM ಆದ್ರೆ ನಾನೂ ಸಂತೋಷ ಪಡ್ತೇನೆ: ಪರಮೇಶ್ವರ್

ಇನ್ನು ಈ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದ್ದು, “ಶ್ರೇಯಸ್ ಅಯ್ಯರ್ಗೆ ಗಾಯವಾಗಿದೆ. ಅವರು ವೈದ್ಯಕೀಯವಾಗಿ ಸ್ಥಿರವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ವೈದ್ಯಕೀಯ ತಂಡವು ಸಿಡ್ನಿಯಲ್ಲಿಯೇ ಭಾರತೀಯ ತಂಡದ ವೈದ್ಯರೊಂದಿಗೆ ಅವರ ಪ್ರಗತಿಯನ್ನು ಗಮನಿಸುತ್ತಿದೆ.”
ಈ ಗಾಯದ ಹಿನ್ನೆಲೆ, ಅಯ್ಯರ್ ಮೂರನೇ ಏಕದಿನ ಪಂದ್ಯದಲ್ಲಿ ಹರ್ಷಿತ್ ರಾಣಾ ಅವರ ಎಸೆತಕ್ಕೆ ಅಲೆಕ್ಸ್ ಕ್ಯಾರಿ ಹಾಕಿದ ಶಾಟ್ ವೇಳೆ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ಡೈವಿಂಗ್ ಮಾಡಿದಾಗ ಸಂಭವಿಸಿದೆ. ತಕ್ಷಣವೇ ವೈದ್ಯಕೀಯ ನೆರವು ನೀಡಲಾಗಿದ್ದು, ಅವರು ಸದ್ಯ ತೀವ್ರ ನಿಗಾದಲ್ಲಿದ್ದಾರೆ.

ಇದನ್ನು ನೋಡಿ : ಆಂತರಿಕ ರಕ್ತಸ್ರಾವ… ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು




