Hassan : ಓವರ್ ಹೆಡ್ ಟ್ಯಾಂಕ್ಗೆ ಪೈಂಟ್ ಮಾಡುತ್ತಿದ್ದಾಗ ಕಬ್ಬಿಣದ ರಾಡ್ ಮುರಿದು ಬಿದ್ದು ಕಾರ್ಮಿಕನೋರ್ವ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಹೊಳೆನರಸೀಪುರದ (Holenarasipur) ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ.

Hassan: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಗ್ರಾಮದಲ್ಲಿ ಓವರ್ಹೆಡ್ ಟ್ಯಾಂಕ್ಗೆ ಪೇಂಟ್ ಮಾಡುತ್ತಿದ್ದ ವೇಳೆ ಕಾರ್ಮಿಕನೊಬ್ಬ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಓವರ್ ಹೆಡ್ ಟ್ಯಾಂಕ್ಗೆ ಪೈಂಟ್ ಮಾಡುವಾಗ ದುರ್ಘಟನೆ
ಮೃತನನ್ನು ಆಕಾಶ್ (31) ಎಂದು ಗುರುತಿಸಲಾಗಿದೆ. ಆಕಾಶ್ ಅವರು ಟ್ಯಾಂಕ್ಗೆ ಅಳವಡಿಸಿದ್ದ ಕಬ್ಬಿಣದ ರಾಡ್ ಮೇಲೆ ನಿಂತು ಪೇಂಟ್ ಕೆಲಸ ಮಾಡುತ್ತಿದ್ದರು. ಈ ವೇಳೆ ಆ ರಾಡ್ ಆಕಸ್ಮಿಕವಾಗಿ ಮುರಿದು ಬಿದ್ದ ಕಾರಣ, ಅವರು ಟ್ಯಾಂಕ್ ಮೇಲಿನಿಂದ 100ಕ್ಕೂ ಹೆಚ್ಚು ಅಡಿ ನೇರವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Hassan : ಕೆರೆಗೆ ಬಿದ್ದು ಸಹೋದರರು ಸಾವು
ಘಟನಾ ಸ್ಥಳಕ್ಕೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು ಭೇಟಿ
ಇನ್ನು ಘಟನಾ ಸ್ಥಳಕ್ಕೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಘಟನೆಯ ಕುರಿತು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
MUST WATCH: SHOCKING MUR*ER | ಮಕ್ಕಳ ಜಗಳ ಅಪ್ಪನ ಕೊಲೆಯಲ್ಲಿ ಅಂತ್ಯ | HASSAN NEWS |




