Kannada Actress Harassement : ಕನ್ನಡ ಚಿತ್ರರಂಗದ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ AVR ಗ್ರೂಪ್ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

Kannada Actress Harassement : ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ.
ACP ಚಂದನ್ ಹಾಗೂ ತಂಡ ಶ್ರೀಲಂಕಾದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗಲೇ ಅರವಿಂದ್ರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ತಿಂಗಳು 17ರಂದು ನಟಿಯ ದೂರು ಆಧಾರದಲ್ಲಿ FIR ದಾಖಲಾಗಿತ್ತು.
ಪರಿಚಯದಿಂದ ಕಿರುಕುಳದ ತನಕ – ಪ್ರಕರಣದ ಪೂರಕ ಮಾಹಿತಿ
ನಟಿ ಮತ್ತು ಅರವಿಂದ್ರ ಪರಿಚಯ 2021ರಲ್ಲಿ ಆರಂಭವಾಗಿತ್ತು. 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್ ಕ್ರಿಕೆಟ್ ಕಪ್’ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಲು ಅರವಿಂದ್ ನಟಿಯನ್ನು ಆಹ್ವಾನಿಸಿದ್ದ.
ನಟಿ ಶ್ರೀಲಂಕಾಕ್ಕೆ ತೆರಳಿದ್ದು, ಅಲ್ಲಿ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಪ್ರೀತಿ–ಕಾಳಜಿಯಿಂದ ವರ್ತಿಸುತ್ತಿದ್ದ ಅರವಿಂದ್ರ ನಡವಳಿಕೆ ನಂತರ ಬದಲಾಗತೊಡಗಿದೆಯಂತೆ.
2022ರ ಆಗಸ್ಟ್ನಲ್ಲಿ ಅರವಿಂದ್ ನಟಿಯ ಜೊತೆ ಸಂಪರ್ಕ ಕಡಿತಗೊಳಿಸಿದ್ದ, ಆದರೆ ಮತ್ತೆ ಸಂಪರ್ಕ ಬೆಳೆಸಿಕೊಂಡು ಕಿರುಕುಳ ನೀಡಲು ಆರಂಭಿಸಿದ್ದ. ನಟಿಗೆ ನಂತರ ಅವನ ಮಾನಸಿಕ ಸ್ಥಿತಿ ಹಾಗೂ ಮದ್ಯದ ವ್ಯಸನದ ಬಗ್ಗೆ ತಿಳಿದುಬಂದಿತಂತೆ.
‘ಮದುವೆಯಾಗುತ್ತೇನೆ’ ಎಂದ ಆರೋಪ – ನಟಿ ಆತ್ಮಹತ್ಯೆ ಯತ್ನ
2024ರಲ್ಲಿ ಅರವಿಂದ್ ನಟಿಗೆ ಫೋನ್ ಮಾಡಿ, “ನಿನ್ನನ್ನು ಮದುವೆಯಾಗುತ್ತೇನೆ” ಎಂದು ಒತ್ತಡ ಹಾಕಿದ್ದ. ಭಯಗೊಂಡ ನಟಿ ನೂರು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರಂತೆ. ಅರವಿಂದ್ ತಕ್ಷಣ ನಟಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರೂ, ಕುಟುಂಬಕ್ಕೆ ವಿಷಯ ತಿಳಿಸಲು ಅವಕಾಶ ನೀಡಿರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಟಿ ಮೊಬೈಲ್ ಕೊಡಲು ಕೇಳಿದಾಗ ಅರವಿಂದ್ ಅವಳ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಅರೆಬೆತ್ತಲೆ ಮಾಡಿದ್ದಾನೆ ಎಂಬುದು ಆಕ್ಷೇಪ.
ಇದನ್ನು ಓದಿ : ಕುಡಿದ ಮತ್ತಿನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ವ್ಯಕ್ತಿ
‘ಕೋಟಿ ರೂಪಾಯಿ ಕೊಡಬೇಕು’ ಎಂದು ಬೆದರಿಕೆ
ನಂತರ ನಟಿ ಬೇರೆ ದಾರಿ ಕಾಣದೆ ತಾಯಿ ಬಳಿ ವಿಚಾರ ಹೇಳಿಕೊಂಡಿದ್ದರು. ಆಗ ಅರವಿಂದ್, ‘ನಟಿ ನನ್ನಿಂದ ಸಾಕಷ್ಟು ಖರ್ಚು ಮಾಡಿಸಿದ್ದಾಳೆ. ಕೋಟಿ ರೂಪಾಯಿ ಕೊಡಬೇಕು’ ಎಂದು ಬೆದರಿಕೆ ಹಾಕಿದ್ದ. ನಂತರ ನಟಿ ಹಾಗೂ ಅವರ ಗೆಳೆಯರ ಬಗ್ಗೆ ಇಲ್ಲಸಲ್ಲದ ಆರೋಪವನ್ನು ಅರವಿಂದ್ ಮಾಡಿದ್ದರಂತೆ.
ಯಾರು ಈ ಅರವಿಂದ್ ರೆಡ್ಡಿ?
ಈ ಎಲ್ಲಾ ಕಾರಣಕ್ಕೆ ಅವರನ್ನು ಬಂಧಿಸುವಂತೆ ನಟಿ ಕೋರಿದ್ದರು.ಅರವಿಂದ್ ರಿಯಲ್ ಎಸ್ಟೇಟ್ ಉದ್ಯಮಿ. ‘ಮಹಾರಾಜ ಬಳ್ಳಾರಿ ಟಸ್ಕರ್ಸ್’ ಕ್ರಿಕೆಟ್ ತಂಡದ ನಾಯಕ ಕೂಡ ಹೌದು. ಆತ ಸಿನಿಮಾ ನಿರ್ಮಾಪಕ ಕೂಡ ಹೌದು. ಚಲನ ಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ.
ಪೊಲೀಸರು ಕೈಗೊಂಡ ಕ್ರಮ
ನಟಿಯ ದೂರು ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿ, అರವಿಂದ ರೆಡ್ಡಿಯನ್ನು ಶ್ರೀಲಂಕಾದಿಂದ ವಾಪಾಸಾಗುತ್ತಿದ್ದಾಗಲೇ ಬಂಧಿಸಿದ್ದಾರೆ. ಪ್ರಕರಣದ ಬಗ್ಗೆ ಮುಂದಿನ ತನಿಖೆ ನಡೆಯುತ್ತಿದೆ.
ಇದನ್ನು ನೋಡಿ : ಮಂಗಳೂರು: ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ; ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಬೆಂಗಳೂರಿನ ಮೂವರು ಸಾವು




