Bengaluru Crime News : ಬಿಎಂಟಿಸಿಯ ನಿವೃತ್ತ ಚಾಲಕರೊಬ್ಬರು ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Bengaluru Crime News : ಬೆಂಗಳೂರು ದಕ್ಷಿಣ ವಲಯದ ಸುಬ್ರಮಣ್ಯಪುರದ ಚಿಕ್ಕಗೌಡನ ಪಾಳ್ಯದಲ್ಲಿ ಮನಕಲಕುವ ಘಟನೆ ನಡೆದಿದೆ. ವ್ಹೀಲ್ಚೇರ್ನಲ್ಲಿ ಬದುಕುತ್ತಿದ್ದ ಪತ್ನಿಯನ್ನು ಪತಿ ಕ್ರೂರವಾಗಿ ಕೊಂದು, ಬಳಿಕ ತಾನೇ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಅನಾರೋಗ್ಯ ಪೀಡಿತ ಪತ್ನಿ–ಪತಿಯ ನಡುವೆ ಜಗಳ
ಬಿಎಂಟಿಸಿಯಲ್ಲಿ ಚಾಲಕರಾಗಿ ಕೆಲಸ ಮಾಡಿ ನಿವೃತ್ತರಾಗಿದ್ದ ವೆಂಕಟೇಶನ್ (65) ಅವರು, ಕೆಲ ತಿಂಗಳ ಹಿಂದೆ ಸ್ಟ್ರೋಕ್ಗೆ ಒಳಗಾಗಿ ವ್ಹೀಲ್ಚೇರ್ನಲ್ಲಿ ಜೀವನ ಸಾಗಿಸುತ್ತಿದ್ದ ತಮ್ಮ ಪತ್ನಿ ಬೇಬಿ (65) ಅವರನ್ನು ಮಂಗಳವಾರ ಜಗಳದ ನಂತರ ಕೊಲೆ ಮಾಡಿದ್ದಾರೆ. ಕುಟುಂಬಸ್ಥರ ಪ್ರಕಾರ, ದಂಪತಿಗಳು ಹಳೆಯ ದಿನಗಳಿಂದಲೂ ಸಣ್ಣಪುಟ್ಟ ವಿಚಾರಗಳಿಗೂ ಜಗಳವಾಡುತ್ತಿದ್ದರು. ಮಂಗಳವಾರವೂ ನಡೆದ ಜಗಳವೇ ದುರಂತಕ್ಕೆ ಕಾರಣವಾಗಿದೆ.
ಇದನ್ನು ಓದಿ : ಮೂವರು ಮಕ್ಕಳ ತಾಯಿಯ Deadly Murder
ಬಟ್ಟೆ ಒಣಗಿಸುವ ವೈರ್ನಿಂದ ಪತ್ನಿ ಕೊಲೆ, ಬಳಿಕ ಪತಿ ಆತ್ಮಹತ್ಯೆ
ಪ್ರಾಥಮಿಕ ತನಿಖೆಯ ಪ್ರಕಾರ, ಕೋಪಗೊಂಡ ವೆಂಕಟೇಶನ್ ಅವರು ಬಟ್ಟೆ ಒಣಗಿಸುವ ವೈರ್ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದು, ನಂತರ ಅದೇ ವೈರ್ ಬಳಸಿ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆ ಸಮಯದಲ್ಲಿ ಅವರ ಇಬ್ಬರು ಮಕ್ಕಳು ಕೆಲಸದ ನಿಮಿತ್ತ ಮನೆಯ ಹೊರಗಡೆ ಇದ್ದರು.
ಮಧ್ಯಾಹ್ನ ಸೊಸೆ ಮನೆಗೆ ಬಂದು ನೋಡಿದಾಗ ದಂಪತಿಯ ಮೃತದೇಹಗಳು ಕಾಣಿಸಿಕೊಂಡಿದ್ದು, ತಕ್ಷಣವೇ ಸುಬ್ರಮಣ್ಯಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ತನಿಖೆ ಮುಂದುವರಿದಿದೆ
ಸುಬ್ರಮಣ್ಯಪುರ ಪೊಲೀಸ್ ಠಾಣೆ ಪ್ರಾಥಮಿಕ ಮಾಹಿತಿಯನ್ನು ಆಧರಿಸಿ ಮರ್ಡರ್–ಸುಸೈಡ್ ಕೇಸ್ ಎಂದು ದಾಖಲಿಸಿದ್ದು, ಘಟನೆಯ ಮೂಲ ಕಾರಣಗಳ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನು ನೋಡಿ : GUBBI | ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬ ವಿದ್ಯುತ್ ತಗುಲಿ ವ್ಯಕ್ತಿ ಸುಟ್ಟು ಭಸ್ಮ




