Modi ಸರ್ಕಾರಕ್ಕೆ 12 ವರ್ಷ – ಕೋಟ್ಯಂತರ ಜನರ ಬದುಕು ಬದಲಿಸಿದ 5 ಮಹತ್ವದ ಯೋಜನೆಗಳು.

ಪ್ರಧಾನಮಂತ್ರಿ ನರೇಂದ್ರ ಮೋದಿ ( Narendra Modi ) ನೇತೃತ್ವದ ಕೇಂದ್ರ ಸರ್ಕಾರ 12 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಈ ಅವಧಿಯಲ್ಲಿ ಜಾರಿಗೊಂಡ ಹಲವು ಮಹತ್ವಾಕಾಂಕ್ಷಿ ಯೋಜನೆಗಳು ದೇಶದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಹಣಕಾಸು ಸೇರ್ಪಡೆಯಿಂದ ಆರೋಗ್ಯ ಭದ್ರತೆಯವರೆಗೆ, ಸ್ವಚ್ಛತೆಯಿಂದ ವಸತಿ ಸೌಲಭ್ಯಗಳವರೆಗೆ ವಿವಿಧ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಕೋಟ್ಯಂತರ ಜನರ ಬದುಕಿನಲ್ಲಿ ಬದಲಾವಣೆ ತಂದಿವೆ.
ಪ್ರಧಾನ ಮಂತ್ರಿ ಜನಧನ್ ಯೋಜನೆ
2014ರ ಆಗಸ್ಟ್ 28ರಂದು ಆರಂಭವಾದ ಪ್ರಧಾನ ಮಂತ್ರಿ ಜನಧನ್ ಯೋಜನೆ ದೇಶದ ಅತಿದೊಡ್ಡ ಹಣಕಾಸು ಸೇರ್ಪಡೆ ಕಾರ್ಯಕ್ರಮವಾಗಿ ಗುರುತಿಸಿಕೊಂಡಿದೆ. ಬ್ಯಾಂಕ್ ಖಾತೆ ಇಲ್ಲದವರಿಗೆ ಉಚಿತ ಖಾತೆ ತೆರೆಯುವ ಅವಕಾಶ ಕಲ್ಪಿಸಲಾಗಿದ್ದು, ಪ್ರಸ್ತುತ 58 ಕೋಟಿಗೂ ಅಧಿಕ ಖಾತೆಗಳು ತೆರೆಯಲ್ಪಟ್ಟಿವೆ.

ಸ್ವಚ್ಛ ಭಾರತ ಅಭಿಯಾನ
ಅದೇ ವರ್ಷ ಅಕ್ಟೋಬರ್ 2ರಂದು ಆರಂಭವಾದ ಸ್ವಚ್ಛ ಭಾರತ ಅಭಿಯಾನ ದೇಶವನ್ನು ಮುಕ್ತ ಶೌಚಾಚರಣೆಯಿಂದ ಮುಕ್ತಗೊಳಿಸುವ ಗುರಿ ಹೊಂದಿತ್ತು. ಯೋಜನೆಯಡಿ 12 ಕೋಟಿಗೂ ಅಧಿಕ ಶೌಚಾಲಯಗಳು ನಿರ್ಮಾಣಗೊಂಡಿದ್ದು, ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ
2015ರಲ್ಲಿ ಆರಂಭವಾದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಕೈಗೆಟುಕುವ ಮನೆಗಳನ್ನು ಒದಗಿಸಲಾಗಿದೆ.
ಯೋಜನೆಯಡಿ 5 ಕೋಟಿಗೂ ಅಧಿಕ ಮನೆಗಳಿಗೆ ಮಂಜೂರಾತಿ ದೊರೆತಿದ್ದು, 4 ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಪೂರ್ಣಗೊಂಡಿದೆ.
ಇದನ್ನು ಓದಿ : ‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ Modi ಗರಂ..!

ಪ್ರಧಾನ ಮಂತ್ರಿ ಉಜ್ವಲ ಯೋಜನೆ
2016ರಲ್ಲಿ ಜಾರಿಗೆ ಬಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಉಚಿತ ಎಲ್ಪಿಜಿ ಸಂಪರ್ಕಗಳನ್ನು ನೀಡಲಾಗಿದೆ.
ಇದುವರೆಗೆ 10 ಕೋಟಿಗೂ ಅಧಿಕ ಗ್ಯಾಸ್ ಸಂಪರ್ಕಗಳನ್ನು ವಿತರಿಸಲಾಗಿದ್ದು, ಸಾಂಪ್ರದಾಯಿಕ ಇಂಧನದಿಂದ ಉಂಟಾಗುತ್ತಿದ್ದ ಆರೋಗ್ಯ ಸಮಸ್ಯೆಗಳನ್ನು ತಗ್ಗಿಸಲು ಸಹಕಾರಿಯಾಗಿದೆ.
ಆಯುಷ್ಮಾನ್ ಭಾರತ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ
2018ರಲ್ಲಿ ಆರಂಭವಾದ ಆಯುಷ್ಮಾನ್ ಭಾರತ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ವಿಶ್ವದ ಅತಿದೊಡ್ಡ ಸರ್ಕಾರಿ ಆರೋಗ್ಯ ವಿಮಾ ಯೋಜನೆಗಳಲ್ಲಿ ಒಂದಾಗಿದೆ. 44 ಕೋಟಿಗೂ ಅಧಿಕ ಆಯುಷ್ಮಾನ್ ಕಾರ್ಡ್ಗಳನ್ನು ವಿತರಿಸಲಾಗಿದ್ದು, ಕೋಟ್ಯಂತರ ಜನರು ಉಚಿತ ಚಿಕಿತ್ಸೆ ಸೌಲಭ್ಯ ಪಡೆದುಕೊಂಡಿದ್ದಾರೆ.

ದೇಶದ ವಿವಿಧ ವರ್ಗಗಳ ಜನರಿಗೆ ನೆರವು
ಇವುಗಳ ಜತೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ, ಸೌಭಾಗ್ಯ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಸೇರಿ ಹಲವು ಯೋಜನೆಗಳು ದೇಶದ ವಿವಿಧ ವರ್ಗಗಳ ಜನರಿಗೆ ನೆರವಾಗುತ್ತಿವೆ.
ಇದನ್ನು ನೋಡಿ : ಮಾರ್ಕೆಟ್ನಲ್ಲಿ ಸುಂಕ ಕಟ್ಟಿದ್ರು ನೋ ಯೂಸ್ – ಅಂತರಸನಹಳ್ಳಿ ಮಾರ್ಕೆಟ್ ಗಬ್ಬೇದ್ದು ನಾರುತ್ತಿದೆ





