NAGAVALLI NEWS : ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಜವಾಬ್ದಾರಿ. ಈ ಕಾರಣದಿಂದ ಇಂದು ವಿಶ್ವದಾದ್ಯಂತ ಪರಿಸರ ದಿನಾಚರಣೆಯನ್ನ ಆಚರಿಸಲಾಗುತ್ತಿದ್ದು, ತುಮಕೂರು ತಾಲೂಕು ನಾಗವಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿಯೂ ಅದ್ದೂರಿಯಾಗಿ ಪರಿಸರ ದಿನಾಚರಣೆಯನ್ನ ಆಚರಿಸಲಾಯಿತು.
ಹೌದು…ಪರಿಸರ ದಿನಾಚರಣೆಯ ಅಂಗವಾಗಿ ಇಂದು ನಾಗವಲ್ಲಿ ಕೆಪಿಎಸ್ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಸಿಗಳನ್ನ ನೆಟ್ಟು ನಂತರ ಮಕ್ಕಳ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಶಾಲೆಯ ಉಪಪ್ರಾಂಶುಪಾಲರಾದ ಜಿ.ಶ್ರೀನಿವಾಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿದ್ರು. ಭಾರತ ಸೇವಾದಳದ ಜಿಲ್ಲಾ ಸಂಘಟಕರಾದ ಶಿವರಾಜ್, ಶಿಕ್ಷಕರಾದ ಅನಿಲ್ ಕುಮಾರ್, ಶಿಕ್ಷಕಿಯರಾದ ವೀಣಾ, ವಿಜಯಲಕ್ಷ್ಮಿ, ಭಾವೈಕ್ಯ ಯುವಜನ ಸಂಘದ ಪ್ರಧಾನ ಕಾರ್ಯದರ್ಶಿ ಸಲೀಂ ಖಾನ್, ಸೇರಿದಂತೆ ಕರ್ನಾಟಕ ರಕ್ಷಣಾ ವೇದಿಕೆ, ನವಿಲ್ ಫೌಂಡೇಶನ್, ಐಕ್ಯ ಪೌಂಡೇಷನ್, ವನಸಿರಿಯ ಸಂಸ್ಥೆಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.
ಮೊದಲು ಸಸಿ ನೆಡುವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು ಮತ್ತು ಅತಿಥಿಗಳು ಸಸಿಗಳನ್ನ ನೆಟ್ಟು ನೀರು ಹಾಕಿ ಖುಷಿಪಟ್ಟರು. ನಂತರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಣ್ಣಿನ ಫಲವತ್ತತೆ ಹಾಗೂ ಬೇರೆ ಬೇರೆ ರೀತಿಯ ಬೆಳೆಗಳ ಕುರಿತು ವಿವರಿಸಲಾಯಿತು.