MYSORE NEWS : ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಭಯಾನಕ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಒಂದು KSRTC ಬಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ರಸ್ತೆ ಮಧ್ಯದಲ್ಲಿ ಹೊತ್ತಿ ಉರಿದ ಘಟನೆ ನಡೆದಿದೆ. ತಾಂತ್ರಿಕ ದೋಷವೇ ಇದಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ.
ಮೈಸೂರು ನಗರದ ಕೆಎಸ್ಆರ್ಟಿಸಿ ಬಸ್ ಬನ್ನೂರಿನ ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ, ತಾಂತ್ರಿಕ ದೋಷದಿಂದ ಬಸ್ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತು. ಈ ಬೆಂಕಿ ಕ್ಷಣಾರ್ಧದಲ್ಲಿ ಬಸ್ನ ಇಡೀ ಒಳಭಾಗವನ್ನೂ ವ್ಯಾಪಿಸಿತು.
ಬಸ್ನಲ್ಲಿ ಸುಮಾರು ಮಂದಿ ಪ್ರಯಾಣಿಕರು ಇದ್ದರು. ಚಾಲಕದ ಚುರುಕಾದ ಕ್ರಮದಿಂದಾಗಿ ಎಲ್ಲರನ್ನೂ ಸುರಕ್ಷಿತವಾಗಿ ಬಸ್ನಿಂದ ಕೆಳಗಿಳಿಸಲು ಸಾಧ್ಯವಾಯಿತು. ನೋಡ ನೋಡುತ್ತಿದ್ದಂತೆ ಬಸ್ ತುಂಬಾ ವ್ಯಾಪಿಸಿದ ಬೆಂಕಿಗೆ ಬಸ್ ಹೊತ್ತಿ ಉರಿದೆದೆ. ಇನ್ನು ಘಟನೆ ಸ್ಥಳಕ್ಕೆ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಆದರೂ ಬಸ್ನ ಅರ್ಧ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.