BANGALORE : ಬೆಂಗಳೂರು ನಗರದ ತೋಟದಗುಡ್ಡದಹಳ್ಳಿಯಲ್ಲಿ [TOTADAGUDDADAHALLI] ಕೆಲಸ ಸಿಗಲಿಲ್ಲವೆಂದು ಮನನೊಂದು ಒಬ್ಬ ಯುವಕ ಆತ್ಮಹತ್ಯೆಗೆ [SUCIDE] ಶರಣಾದ ಘಟನೆ ನಡೆದಿದೆ. ಬಿಹಾರ ಮೂಲದ 22 ವರ್ಷದ ರಾಹುಲ್ ಕುಮಾರ್ ಯಾದವ್ [RAHUL KUMAR YADAV] ಎಂಬ ಯುವಕ ಮೃತಪಟ್ಟಿದ್ದಾರೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಹುಲ್, ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಇತ್ತೀಚೆಗೆ ಕೆಲಸ ಸಿಗದ ಕಾರಣ ಮನನೊಂದು ಊರಿಗೆ ಹಿಂತಿರುಗಲು ತೀರ್ಮಾನಿಸಿದ್ದರು. ಆದರೆ ಈ ನಿರ್ಧಾರಕ್ಕೆ ಪೋಷಕರು ಸಹಕಾರ ನೀಡದೆ, ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಹೆಚ್ಚು ಮನನೊಂದು ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇನ್ನು ಈ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.