DAKSHINA KANNADA : ಸ್ನಾನಕ್ಕೆಂದು ಕೆರೆಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಸಾವು

DAKSHINA KANNADA NEWS : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕಾರಿಂಜದಲ್ಲಿ ಇಂದು ಶೋಕಾಂತಿಕ ಘಟನೆ ಸಂಭವಿಸಿದ್ದು, ಸ್ನಾನಕ್ಕಾಗಿ ಕೆರೆಗೆ ಇಳಿದ 19 ವರ್ಷದ ವಿದ್ಯಾರ್ಥಿ ದುರಂತವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮೃತನನ್ನು ಕಾರಿಂಜ ಕಂಗಿಹಿತ್ಲು ನಿವಾಸಿ ಶ್ರೀಧರ್ ಮೂಲ್ಯ ಅವರ ಪುತ್ರ ಚೇತನ್ ಎಂದು ಗುರುತಿಸಲಾಗಿದೆ. ಚೇತನ್ ಇಂದು ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಬಳಿಕ ದೇವಾಲಯದ ಸಮೀಪವಿರುವ ಕೆರೆಯಲ್ಲಿ ಸ್ನಾನಕ್ಕೆ ಇಳಿದಿದ್ದ ವೇಳೆ ಚೇತನ್‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಅವನ ಜೊತೆಯಲ್ಲಿ ಇದ್ದ ಪ್ರಶ್ವಿತ್ ಎಂಬ ಸ್ನೇಹಿತನಿಗೆ ಈಜು ಬರದ ಕಾರಣ, ಆತ ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿದ್ದನು. ಸ್ಥಳೀಯರು ಕೂಡಲೇ ಪ್ರತಿಕ್ರಿಯಿಸಿ ಕೆರೆಯಲ್ಲಿ ಹುಡುಕಾಟ ನಡೆಸಿ ಚೇತನ್‌ನ್ನು ಮೇಲಕ್ಕೆತ್ತಿದರೂ, ಆತನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ಇನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಸ್ಥಳೀಯರ ನಡುವೆ ದುಃಖದ ಛಾಯೆ ಮೂಡಿಸಿದೆ.

Author:

...
Keerthana J

Copy Editor

prajashakthi tv

share
No Reviews