NELAMANGALA NEWS : ಬೆಂಗಳೂರು ಹೊರವಲಯದ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ದಾರುಣ ಘಟನೆ ಸಂಭವಿಸಿದೆ. ಪುಟಾಣಿ ಮಕ್ಕಳನ್ನು ವಿವಿಧ ಗ್ರಾಮಗಳಿಂದ ಪಿಕ್ ಮಾಡಿ ಶಾಲೆಗೆ ಕರೆತರುತ್ತಿದ್ದ ವೇಳೆ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 30ಕ್ಕೂ ಹೆಚ್ಚು ಮಕ್ಕಳು ಇದ್ದರು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದರೂ ಕೆಲ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನು ಘಟನೆ ಮಾದಾವರದ ನೈಸ್ ರಸ್ತೆಯ ಪಿಕಾಕ್ ಬಡಾವಣೆಯ ಬಳಿ ಬೆಳಿಗ್ಗೆ ಶಾಲೆಗೆ ಹೋಗುವ ಸಮಯದಲ್ಲಿ ಸಂಭವಿಸಿದೆ. ಡೆಲ್ಲಿ ಪಬ್ಲಿಕ್ ಶಾಲೆಗೆ ಸೇರಿದ ಈ ಬಸ್ ಪಲ್ಟಿಯಾಗಿರುವುದಾಗಿ ವರದಿಯಾಗಿದೆ. ಚಾಲಕರ ಮಧ್ಯೆ ಪೈಪೋಟಿ ನಡೆಯುತ್ತಿದ್ದಂತೆ, ಗಮನ ಹರಿಸದೇ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದು, ಇದುವರೆಗೂ ನಿಲ್ಲದ ವೇಗದ ಜೊತೆಗೆ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಮಕ್ಕಳ ಪೋಷಕರು ಸ್ಥಳಕ್ಕೆ ಧಾವಿಸಿದ್ದು, ಆತಂಕ ವ್ಯಕ್ತಪಡಿಸಿದ್ದಾರೆ. ಪೋಷಕರ ಅಭಿಪ್ರಾಯದಂತೆ, ಮಕ್ಕಳ ಜೀವದೊಂದಿಗೆ ಆಟವಾಡುತ್ತಿರುವಂತಹ ನಿರ್ಲಕ್ಷ್ಯವನ್ನು ಶಾಲಾ ಆಡಳಿತ ಹಾಗೂ ಚಾಲಕರು ತಕ್ಷಣ SERIOUS ಆಗಿ ಪರಿಗಣಿಸಬೇಕಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧಪಟ್ಟ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮುಂದಿನ ತನಿಖೆ ಮುಂದುವರೆದಿದೆ.