MANDYA PRADESH : ಮದುವೆಯಿಂದ ಹಿಂದಿರುಗುವಾಗ ಅಪಘಾತ | 9 ಮಂದಿ ಸ್ಥಳದಲ್ಲೇ ಸಾವು

MADYA PRADESH NEWS : ಸಿಮೆಂಟ್​ ತುಂಬಿದ ಟ್ರೇಲರ್​ ಟ್ರಕ್​ವೊಂದು ವ್ಯಾನ್​ ಮೇಲೆ ಉರುಳಿಬಿದ್ದ ಪರಿಣಾಮ ನಾಲ್ವರು ಮಕ್ಕಳು, ಮೂವರು ಮಹಿಳೆಯರು ಸೇರಿ 9 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯ ಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ.

ಮೃತನ್ನು ಮುಖೇಶ್ (40), ಸಾವ್ಲಿ (35), ವಿನೋದ್ (16), ಪಾಯಲ್ (12), ಮಾಧಿ (38), ವಿಜಯ್ ಭರು ಬಮಾನಿಯಾ (14), ಕಾಂತಾ (14), ರಾಗಿಣಿ (9), ಮತ್ತು ಅಕಾಲಿ (35) ಮೃತರೆಂದು ಗುರುತಿಸಲಾಗಿದೆ. ಮೇಘನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಹೇಲಿ ರೈಲ್ವೆ ನಿಲ್ದಾಣದ ಸಮೀಪ ಈ ಅಪಘಾತ ನಡೆದಿದೆ. ಸಾವನ್ನಪ್ಪಿದವರು ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ. ಮದುವೆ ಕಾರ್ಯಕ್ರಮದಿಂದ ಹಿಂದಿರುಗುತ್ತಿ ರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಇನ್ನು ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗುತ್ತಿತ್ತು. ರೈಲು ಮೇಲ್ಸೇತುವೆ ದಾಟುವಾಗ ಟ್ರಕ್​ ಆಯತಪ್ಪಿ ವ್ಯಾನ್ ಮೇಲೆ ಬಿದ್ದಿದೆ. ಅವಘಡದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

 

Author:

...
Keerthana J

Copy Editor

prajashakthi tv

share
No Reviews