ಸಿನಿಮಾ : ಅಂಬರೀಶ್ ಹುಟ್ಟುಹಬ್ಬಕ್ಕೆ ನಟ ದರ್ಶನ್ ವಿಶೇಷ ವಿಶ್

SANDLEWOOD : ನಟ ದರ್ಶನ್ ಅಂಬರೀಶ್ ಅವರ ಮನೆ ಮಗ ಎಂದೇ ಗುರುತಿಸಿಕೊಂಡಿದ್ದರು. ಅಂಬರೀಶ್ ಕಾಲವಾದ ವರ್ಷಗಳ ಬಳಿಕವೂ ಸಹ ಅವರ ಕುಟುಂಬದೊಟ್ಟಿಗೆ ಆತ್ಮೀಯವಾಗಿಯೇ ಇದ್ದರು. ಆದರೆ ರೇಣುಕಾ ಸ್ವಾಮಿ ಪ್ರಕರಣದ ಬಳಿಕ ದರ್ಶನ್ ಹಾಗೂ ಸುಮಲತಾ ನಡುವೆ ಭಿನ್ನಾಭಿಪ್ರಾಯ ಮೂಡಿದಂತಿದೆ. ‌ ಸುಮಲತಾ ಜೊತೆಗೆ ಭಿನ್ನಾಭಿಪ್ರಾಯ ಇದ್ದರೂ ಸಹ ನಟ ದರ್ಶನ್ ಅಂಬರೀಶ್ ಹುಟ್ಟುಹಬ್ಬವನ್ನು ಮರೆತಿಲ್ಲ.

ಅಂಬರೀಶ್ ಅವರ ಹುಟ್ಟುಹಬ್ಬಕ್ಕೆ ಟ್ವೀಟ್ ಮಾಡಿರುವ ನಟ ದರ್ಶನ್, ‘ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ. ಈ ಹುಟ್ಟುಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆಬೆಲ್ ಸ್ಟಾರ್’ ಎಂದಿದ್ದಾರೆ ನಟ ದರ್ಶನ್.‌

 

Author:

...
Keerthana J

Copy Editor

prajashakthi tv

share
No Reviews