ರಾಯಚೂರು : ರಾಯಚೂರು ಜಿಲ್ಲೆ ಲಿಂಗಸುಗೂರಿನ ಹಟ್ಟಿ ಚಿನ್ನದ ಗಣಿಯಲ್ಲಿಏರ್ ಬ್ಲಾಸ್ಟ್ ಸಂಭವಿಸಿ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನು ಈ ಘಟನೆಯಲ್ಲಿ ಮೃತ ಪಟ್ಟ ಕಾರ್ಮಿಕನನ್ನು ಶರಣಬಸವ (ವಯಸ್ಸು 40) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಕಾರ್ಮಿಕನನ್ನು ನಿರುಪಾದಿ ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಚಿನ್ನದ ಗಣಿಯ ಮಲ್ಲಪ್ಪ ಶಾಫ್ಟ್ನಲ್ಲಿ ಸಂಭವಿಸಿದೆ. ಸೂಮಾರು 2,800 ಅಡಿ ಆಳದಲ್ಲಿ ಕಾರ್ಮಿಕರು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಏರ್ ಬ್ಲಾಸ್ಟ್ ಸಂಭವಿಸಿದೆ. ಈ ಬ್ಲಾಸ್ಟ್ನ ಪರಿಣಾಮದಿಂದ ಕೆಲವರು ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಚಿನ್ನದ ಗಣಿ ರೆಸ್ಕ್ಯೂ ಟೀಂ ಈಗಾಗಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಗಾಯಗೊಂಡ ಕಾರ್ಮಿಕನನ್ನು ತುರ್ತು ಚಿಕಿತ್ಸೆಗಾಗಿ ಚಿನ್ನದ ಗಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.