ಆಂಧ್ರಪ್ರದೇಶ : ಕಾರು ಪಲ್ಟಿಯಾಗಿ ಭೀಕರ ಅಪಘಾತ | ಸ್ಥಳದಲ್ಲೇ ಮೂವರ ಸಾವು

ಆಂಧ್ರಪ್ರದೇಶ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪಿರುವ ಘಟನೆ ಆಂಧ್ರಪ್ರದೇಶದ ಕುರ್ನೂಲ್ ಬಳಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿಯ ಮಾಜಿ ತಾಲೂಕು ಅಧ್ಯಕ್ಷ ನವೀನ್‌ (48), ಬಿಜೆಪಿ ಮುಖಂಡ ಸಂತೋಷ್‌ (35) ಹಾಗೂ ಲೋಕೇಶ್‌ (38) ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ.

ನವೀನ್‌ ಎಂಬುವರ ಹುಟ್ಟುಹಬ್ಬ ಹಿನ್ನಲೆ ಆರು ಜನ ಇನೋವಾ ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು, ರಾಯರ ದರ್ಶನ ಮುಗಿಸಿ ವಾಪಸ್‌ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸದ್ಯ ಈ ಸಂಬಂಧ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews