Athani : ಶಾಸಕ ಲಕ್ಷ್ಮಣ ಸವದಿ ಅವರ ಕಾರು ಅಪಘಾತ..!

ATHANI: ಶಾಸಕ ಲಕ್ಷ್ಮಣ ಸವದಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದ ಬಳಿ ಸಂಭವಿಸಿದೆ.

ಶಾಸಕರು ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದಾಗ, ದರೂರ ಗ್ರಾಮದ ಬಳಿ ಅವರ ರೇಂಜ್‌ ರೋವರ್‌ ಕಾರಿಗೆ ಎದುರಿಗೆ ವೇಗವಾಗಿ ಬಂದ ಪಿಕ್‌ ಅಪ್ ವಾಹನ‌ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ಹೊಡೆತದಿಂದ ಕಾರಿಗೆ ಹಾನಿಯಾಗಿದ್ದರೂ, ಅದೃಷ್ಠವಶಾತ್‌ ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಪ್ರಕರಣ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Author:

...
Sushmitha N

Copy Editor

prajashakthi tv

share
No Reviews