TIPTUR NEWS : ತಿಪಟೂರು ವಲಯ–1 ಹಾಗೂ 2ರ ವ್ಯಾಪ್ತಿಯಲ್ಲಿ ಬರುವ ಬಸ್ ನಿಲ್ದಾಣಗಳಲ್ಲಿ ಎಲ್ಲ ಆಟೋ ಚಾಲಕರಿಗೆ ದುಡಿಮೆಗೆ ಅವಕಾಶವಿದೆ ಎಂದು ನ್ಯಾಯಾಲಯ ಆದೇಶ ನೀಡಿದೆ. ಆದ್ರೆಆದೇಶದ ಪಾಲನೆಯಾಗುತ್ತಿಲ್ಲ ಎಂದು ತಿಪಟೂರಿನ ಅಂಬೇಡ್ಕರ್ ಸೇವಾ ಸಮಿತಿ ಆಟೋ ಚಾಲಕರಸಂಘದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೊಪ್ಪ ಶಾಂತಪ್ಪ ಅಸಮಾಧಾನ ವ್ಯಕ್ತಪಡಿಸಿದ್ರು
ನೆನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಂದು ಆಟೋ ನಿಲ್ದಾಣದ ಚಾಲಕ ಮತ್ತೊಂದು ಆಟೊ ನಿಲ್ದಾಣಕ್ಕೆ ಹೋದರೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ಸಾರಿಗೆ ಇಲಾಖೆ ತಕ್ಷಣ ಮಧ್ಯೆ ಪ್ರವೇಶಿಸಿ ಎಲ್ಲ ನಿಲ್ದಾಣಗಳಲ್ಲೂ ದುಡಿಮೆ ಮಾಡಲು ಅವಕಾಶ ನೀಡಬೇಕು. ಸಮಸ್ಯೆ ಬಗೆಹರಿಯದಿದ್ದರೆ ಆಟೋ ಚಾಲಕರು ಹಾಗೂ ಅವರ ಕುಟುಂಬ ಸದಸ್ಯರು ಮತದಾನ ಬಹಿಷ್ಕಾರ ಮಾಡುತ್ತೇವೆ, ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇತ್ತಆಟೋ ನಿಲ್ದಾಣಗಳಲ್ಲಿ ರಾಜಕೀಯ ಒಳ ನುಸುಳಿದ್ದು, ಸ್ಥಳೀಯ ಜನಪ್ರತಿನಿಧಿಗಳು, ರಾಜಕಾರಣಿಗಳು ಸಮಸ್ಯೆ ಬಗೆಹರಿಸುವ ಬದಲು ಮತ ರಾಜಕಾರಣ ಮಾಡುತ್ತಿದ್ದಾರೆ. ಹಲವು ಬಾರಿ ಮನವಿ ಕೊಟ್ಟರೂ ಸ್ಪಂದನ ಸಿಕ್ಕಿಲ್ಲ ಎಂದು ಮತ್ತಿಘಟ್ಟ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.
ಇನ್ನು ಸುದ್ದಿಗೋಷ್ಠಿಯಲ್ಲಿಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಕೂಡಲೇ ಸಮಸ್ಯೆ ಬಗೆಹರಿಸಬೇಕು, ಎಲ್ಲ ಆಟೋ ನಿಲ್ದಾಣಗಳಲ್ಲಿ ದುಡಿಮೆ ಮಾಡಲು ಅವಕಾಶವಿದ್ದು, ಅಡ್ಡಿ ಮಾಡಬಾರದು ಎಂಬ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.ಈ ವೇಳೆತಿಪಟೂರಿನ ಅಂಬೇಡ್ಕರ್ ಸೇವಾ ಸಮಿತಿಯ ಮುಖಂಡರು, ಸದಸ್ಯರುಹಾಜರಿದ್ರು.