BANGALORE : ಸಾವು ಯಾವಾಗ ಹೇಗೆ ಬರುತ್ತೇ ಅನ್ನೋದು ಯಾರಿಗೂ ಗೊತ್ತಿಲ್ಲ, ಅದ್ರಲ್ಲೂ ಇತ್ತೀಚಿನ ದಿನಗಳಲ್ಲಿ ಮಕ್ಕಳು ಸೇರಿದಂತೆ ಯುವಕರಲ್ಲೇ ಹೆಚ್ಚಾಗಿ ಹೃದಯಾಘಾತಗಳು ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಚಿಕ್ಕ ವಯಸ್ಸಿನಲ್ಲೇ ಯುವಕ ಯುವತಿಯರು ಸಾವನ್ನಪ್ಪುತ್ತಿದ್ದಾರೆ. ಬೆಂಗಳೂರು ನಗರದ ಜೆಪಿ ನಗರದಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ 19 ವರ್ಷದ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತನನ್ನು ನಿಶಾಂತ್ (19) ಎಂದು ಗುರುತಿಸಲಾಗಿದ್ದು, ಮೃತ ಯುವಕ ಹೊಳೆನರಸೀಪುರ ಪಟ್ಟಣದ ಚನ್ನಕೇಶವ ಹಾಗೂ ಜ್ಯೋತಿ ದಂಪತಿಯ ಪುತ್ರನಾಗಿದ್ದು. ಡಿಪ್ಲೋಮಾ ವಿದ್ಯಾಭ್ಯಾಸವನ್ನು ಮುಗಿಸಿದ ನಿಶಾಂತ್, ಕೈಗಾರಿಕಾ ತರಬೇತಿ ಪಡೆಯಲು 15 ದಿನಗಳ ಹಿಂದಷ್ಟೆ ಬೆಂಗಳೂರಿಗೆ ಆಗಮಿಸಿದ್ದ ಎನ್ನಲಾಗಿದೆ. ಆದರೆ ಇಂದು ರೂಂನಲ್ಲಿ ಇದ್ದಾಗಲೇ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ , ಕೂಡಲೇ ಆತನನ್ನು ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇನ್ನು ಯುವಕನ ಸಾವಿನ ವಿಷಯ ತಿಳಿದು ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.