Bangalore : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ | ಮೂವರನ್ನು ಅರೆಸ್ಟ್‌ ಮಾಡಿದ ಪೊಲೀಸರು

BANGALORE: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದ ದುರಂತದ ಪ್ರಕರಣ ಸಂಬಂಧ ಆರ್‌ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಡಿಎನ್ಎ ಎಂಟರ್‌ಟೈನ್‌ಮೆಂಟ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಅಲ್ಲದೇ ಆರ್‌ಸಿಬಿ ತಂಡದ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಸಂಸ್ಥೆಯ ಪ್ರತಿನಿಧಿಗಳಾದ ಕಿರಣ್ ಮತ್ತು ಸುಮಂತ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಿಖಿಲ್ ಸೋಸಲೆ ಅವರು ಎಕ್ಸ್‌ ಖಾತೆಯಲ್ಲಿ ‘ವಿಕ್ಟರಿ ಪರೇಡ್’ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಪೊಲೀಸರ ಅನುಮತಿ ಪಡೆಯದೇ ಸಾರ್ವಜನಿಕವಾಗಿ ಪರೇಡ್‌ ಕುರಿತು ಪೋಸ್ಟ್‌ ಹಾಕಿದ್ದಕ್ಕೆ ನಿಖಿಲ್‌ ಸೋಸಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಇಂತಹ ಕಾರ್ಯಕ್ರಮಗಳ ಆಯೋಜನೆಗೂ ಮುನ್ನ ನಿಗದಿತ ನಿಯಮಗಳು ಮತ್ತು ಪ್ರೋಟೋಕಾಲ್‌ಗಳನ್ನು ಪಾಲಿಸಬೇಕಿತ್ತು. ಆದರೆ ಆಯೋಜಕರು ಉತ್ಸಾಹದಲ್ಲಿ ಹಾಗೂ ಯಶಸ್ಸಿನ ಸಂಭ್ರಮದಲ್ಲಿ ಇದನ್ನು ಕಡೆಗಣಿಸಿದ್ದದರಿಂದಲೇ ಈ ರೀತಿಯ ಅಘಾತಕಾರಿ ಪರಿಸ್ಥಿತಿ ಉಂಟಾಗಿದೆ.

ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews