BANGALORE : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆಯುತ್ತಿದ್ದ ಆರ್ ಸಿಬಿ ಗೆಲುವಿನ ವಿಜಯೋತ್ಸವಕ್ಕೆ ಸೇರಿದ್ದ ಜನಸಮೂಹದ ನಿಯಂತ್ರಣ ತಪ್ಪಿ ಉಂಟಾದ ಕಾಲ್ತುಳಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ದುರ್ಘಟನೆ ಬಳಿಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.
ಕಾರ್ಯಕ್ರಮದ ಆಯೋಜನೆ ವೇಳೆ ಸಾರ್ವಜನಿಕರ ನಿಯಂತ್ರಣ ವ್ಯವಸ್ಥೆ ಸರಿಯಾಗಿ ಕಲ್ಪಿಸದೇ ಇದ್ದದನ್ನು ಪ್ರತಿಪಕ್ಷಗಳು ಹಾಗೂ ಸಾಮಾಜಿಕ ಮಾಧ್ಯಮ ಬಳಕೆದಾರರು ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತ ಸಂಭವಿಸಿ ಅನೇಕರು ಜೀವನ್ಮರಣ ನಡೆಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷವೇ ಕಾರಣ, ಸರಿಯಾಗಿ ಜನಸಂದಣಿ ಕ್ರಮಗಳಿಲ್ಲ, ಮೂಲಭೂತ ವ್ಯವಸ್ಥೆಗಳಿಲ್ಲ, ಕೇವಲ ಅವ್ಯವಸ್ಥೆ ಅಮಾಯಕ ಜನರು ಸತ್ತಾಗ, ಕಾಂಗ್ರೆಸ್ ನಾಯಕರಾದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ರಿಕೆಟ್ ಆಟಗಾರರೊಂದಿಗೆ ಫೋಟೋಶೂಟ್ ಮತ್ತು ರೀಲ್ಸ್ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.
ಈ ಘಟನೆ “ಕ್ರಿಮಿನಲ್ ನೆಗೆಲಿಜೆನ್ಸ್” (ಅಪರಾಧಪೂರ್ವಕ ನಿರ್ಲಕ್ಷ್ಯ) ಆಗಿದ್ದು, ಈ ದುರ್ಘಟನೆಯ ಸಂಪೂರ್ಣ ಹೊಣೆಗಾರಿಕೆ ಕಾಂಗ್ರೆಸ್ ಸರ್ಕಾರದ ಮೇಲಿದೆ ಎಂದು ಆರೋಪಿಸಿದ್ದಾರೆ. “ಈ ಹೀನಾಯಕತ್ವದ ಪರಿಣಾಮವೇ ಈ ಪ್ರಾಣಹಾನಿ,” ಎಂದು ಗಂಭೀರವಾಗಿ ಟೀಕೆ ಮಾಡಿದ್ದಾರೆ.