Bangalore : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭೀಕರ ಕಾಲ್ತುಳಿತ | ಏಳು ಮಂದಿ ಸಾವು

BANGALORE : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭೀಕರ ಕಾಲ್ತುಳಿತದಿಂದ ಮಹಿಳೆಯರು ಸೇರಿದಂತೆ ಏಳು ಮಂದಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಇದಲ್ಲದೆ, ಸುಮಾರು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ಮೂವರು ಯುವಕರು ಮತ್ತು ಒಬ್ಬ ಯುವತಿಯ ಸ್ಥಿತಿ ಗಂಭೀರವಾಗಿದೆ.

ಸ್ಟೇಡಿಯಂ ಬಳಿ ಉಂಟಾದ ಭಾರೀ ಜನಜಂಗುಳಿಯಿಂದ ನಿಯಂತ್ರಣ ತಪ್ಪಿ ಜನರು ನೂಕಿ, ಕೆಲವರು ನೆಲಕ್ಕೆ ಬಿದ್ದು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ. ನೂಕುನುಗ್ಗಲಿನ ರಭಸದಲ್ಲಿ ಆಘಾತಗೊಂಡ ಹಲವರನ್ನು ಸ್ಥಳೀಯರು ಹಾಗೂ ಸಿಬ್ಬಂದಿಗಳು ತಕ್ಷಣವೇ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳುಗಳಲ್ಲಿ ಇಬ್ಬರ ಕಾಲು ಮುರಿದಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟಿರುವವರ ಗುರುತು ಇನ್ನೂ ಬಹಿರಂಗವಾಗಿಲ್ಲ. ಸ್ಥಳಕ್ಕೆ ತಕ್ಷಣವೇ ಪೊಲೀಸರು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದು, ಹೆಚ್ಚಿನ ಗಲಾಟೆ ತಪ್ಪಿಸಲು ಭದ್ರತಾ ವ್ಯವಸ್ಥೆ ಗಟ್ಟಿಗೊಳಿಸಲಾಗಿದೆ. ಅಲ್ಲದೇ ಎಲ್ಲರಿಗೂ ವಾಪಸ್‌ ಮನೆಗೆ ತೆರಳುವಂತೆ ಹೇಳಲಾಗ್ತಿದೆ.

Author:

...
Sushmitha N

Copy Editor

prajashakthi tv

share
No Reviews