Bangalore : ಕಾಲ್ತುಳಿತದಿಂದ ಮೃತಪಟ್ಟವರಿಗಾಗಿ ಕಣ್ಣೀರು ಹಾಕಿದ ಡಿಸಿಎಂ ಡಿ.ಕೆ. ಶಿವಕುಮಾರ್

BANGALORE : ಬೆಂಗಳೂರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನಿನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರಿಗಾಗಿ ಕಣ್ಣೀರಿಟ್ಟರು. ಘಟನೆಗೆ ಸಂಬಂಧಿಸಿದಂತೆ ಮಾತನಾಡುತ್ತಾ, “ಚಿಕ್ಕ ಮಕ್ಕಳ ಸಾವನ್ನು ಅವರ ಕುಟುಂಬಗಳು ಮಾತ್ರವಲ್ಲ, ನಾಡಿನ ಜನರೆಲ್ಲಾ ಅರಗಿಸಿಕೊಳ್ಳಲಾಗಿಲ್ಲ. ಇದು ನಿಜಕ್ಕೂ ನಾಡಿನ ನೋವು,” ಎಂದು ಗದ್ಗದಿತ ಧ್ವನಿಯಲ್ಲಿ ಹೇಳಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಸ್ಪಷ್ಟತೆ ನೀಡಿದ ಡಿಸಿಎಂ, “ಆರ್ಸಿಬಿ ತಂಡದ ಮ್ಯಾನೇಜ್ಮೆಂಟ್ ಬೆಂಗಳೂರಿಗೆ ಬರುತ್ತಿರುವ ವಿಷಯವನ್ನು ತಿಳಿಸಿದ್ದರು. ಹೀಗಾಗಿ ಸರ್ಕಾರಕ್ಕೆ ಬೇರೆ ಆಯ್ಕೆ ಇರಲಿಲ್ಲ, ಸನ್ಮಾನ ಮಾಡಬೇಕಾಯಿತು, ಯಾರನ್ನೂ ನಾನು ದೂಷಿಸುವ ಉದ್ದೇಶದಿಂದ ಈ ಮಾತುಗಳನ್ನು ಹೇಳುತ್ತಿಲ್ಲ. ಆದರೆ ಈ ಘಟನೆಯಿಂದ ನಾವು ಗಂಭೀರ ಪಾಠ ಕಲಿಯಬೇಕಿದೆ. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಎಲ್ಲಾ ಜಾಗ್ರತೆಗಳನ್ನು ವಹಿಸಬೇಕು,” ಎಂದು ಹೇಳಿದರು.

ರಾಜ್ಯ ಸರ್ಕಾರ ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ತನಿಖೆ ನಡೆಸಿ ಈ ಹಿಂದೆ ಕಂಡುಬಂದ ಲೋಪದೋಷಗಳನ್ನು ಸರಿಪಡಿಸುವ ಕ್ರಮ ಕೈಗೊಳ್ಳಲಿದೆ. ಈ ಘಟನೆಯಿಂದ ಪಾಠಗಳನ್ನು ಕಲಿಯಬೇಕಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.

 

Author:

...
Sushmitha N

Copy Editor

prajashakthi tv

share
No Reviews