ಬೆಂಗಳೂರು: ಗೃಹ ಲಕ್ಷ್ಮಿ ಪಡೆಯುತ್ತಿದ್ದವರಿಗೆ ಶಾಕಿಂಗ್ ನ್ಯೂಸ್..!

ಬೆಂಗಳೂರು:

ಕಾಂಗ್ರೇಸ್‌ ಸರ್ಕಾರ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ‌ ಜಾರಿ ತಂದಿದೆ. ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ತಿದ್ದುಪಡಿ ಮಾಡಲು ತೀರ್ಮಾನಿಸಿದೆ. ಅನರ್ಹ ಮಹಿಳೆಯರನ್ನು ಗುರುತಿಸಿ ಅವರ ಆರ್ಥಿಕ ಸ್ಥಿತಿಗತಿಯ ಆಧಾರದ ಮೇಲೆ ಹಣ ವಿತರಣೆ ಮಾಡಲು ಮುಂದಾಗಿದೆ.

ಈ ಹಿಂದೆ ಗೃಹಲಕ್ಷ್ಮಿ ಯೋಜನೆಯಡಿ 1.28 ಕೋಟಿ ಮಹಿಳೆಯರು ಹಣ ಪಡೆಯುತ್ತಿದ್ದರು, ಆದರೆ ಇದರಲ್ಲಿ ಸುಮಾರು 2 ಲಕ್ಷ ಮಹಿಳೆಯರು ತೆರಿಗೆ ಪಾವತಿಸುತ್ತಿದ್ದಾರೆ, ಹಾಗೂ ಜಿಎಸ್‌ ಟಿ ಸಂಖ್ಯೆಯನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಕೆಲವು ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದರೂ ಯೋಜನೆಯ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಪರಿಶೀಲನೆ ಸಭೆ ನಡೆಸುತ್ತಿದೆ. ಹಾಗೂ ಫಲಾನುಭವಿಗಳ ಆದಾಯ ವಿವರಗಳನ್ನು ಮತ್ತೆ ಪರಿಶೀಲಿಸುವ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಮೂಲಕ ರಾಜ್ಯ ಸರ್ಕಾರವು ಯೋಜನೆ ಸದುಪಯೋಗವನ್ನು ಸುಸೂತ್ರವಾಗಿ ನಡೆಸಲು ಸರ್ಕಾರ ಯೋಚಿಸಿದೆ.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವಿತರಿಸುವ ಬಿಪಿಎಲ್ , ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿಯಾಗಿ ಹೆಸರು ಇರುವ ಮಹಿಳೆಯರು ಮಾತ್ರ ಯೋಜನೆಗೆ ಅರ್ಹರಾಗುತ್ತಾರೆ. ಜೊತೆಗೆ, ಕುಟುಂಬದ ಯಜಮಾನಿ ಅಥವಾ ಪತಿ ತೆರಿಗೆ ಪಾವತಿದಾರರಾಗಿದ್ದರೆ ಅಥವಾ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ, ಅವರಿಗೆ ಯೋಜನೆಯ ಸೌಲಭ್ಯ ದೊರೆಯುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.


 

Author:

...
Editor

ManyaSoft Admin

Ads in Post
share
No Reviews