BANGALORE : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿಬಿ ವಿಜಯೋತ್ಸವದ ಆಚರಣೆ ವೇಳೆ ಕಾಲ್ತುಳಿತವಾಗಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದರು. ಸದ್ಯ ಈ ಕೇಸ್ ಕೋರ್ಟ್ ಕಟಕಟೆಯಲ್ಲಿದೆ. ಹೀಗಿರುವಾಗ ಆರ್ಸಿಬಿ ಮಾರಾಟ ಮಾಡಲು ಮುಂದಾಗಿದೆ ಎಂಬ ಸುದ್ದಿ ದೊಡ್ಡಮಟ್ಟದಲ್ಲಿದೆ.
ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರ್ ಸಿಬಿ ಕೊಂಡುಕೊಳ್ಳಲಿದ್ದಾರೆ ಎಂಬ ಬಿಸಿ ಚರ್ಚೆ ಕೂಡ ಹರಿದಾಡಿತ್ತು. ಇದಕ್ಕೆ ಸ್ವತಃ ಡಿಕೆ ಉತ್ತರ ಕೊಟ್ಟಿದ್ದಾರೆ. ದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್,”ನಾನು ಹುಚ್ಚನಲ್ಲ. ನಾನು ಚಿಕ್ಕಂದಿನಿಂದಲೂ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ನ ಸದಸ್ಯ, ಅಷ್ಟೇ. ನನಗೆ ಸಮಯವಿಲ್ಲ, ಆದರೂ ನಿರ್ವಹಣೆಯ ಭಾಗವಾಗಲು ನನಗೆ ಆಫರ್ಗಳು ಬಂದವು… ನನಗೆ ಆರ್ಸಿಬಿ ಏಕೆ ಬೇಕು? ನಾನು ರಾಯಲ್ ಚಾಲೆಂಜ್ ಕುಡಿಯುವುದೇ ಇಲ್ಲ” ಇನ್ನು ಆರ್ ಸಿಬಿ ಖರೀದಿಸ್ತೀನಾ ಎಂದು ಹೇಳುವ ಮೂಲಕ ಆರ್ಸಿಬಿ ಫ್ರಾಂಚೈಸಿಯನ್ನು ಖರೀದಿಸುವ ಬಗ್ಗೆ ಇರುವ ವದಂತಿಗಳನ್ನು ನಿರಾಕರಿಸಿದ್ದಾರೆ.