Bangalore : ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡ್ತಿಲ್ಲ | ಬಿಜೆಪಿ, ಜೆಡಿಎಸ್ ಮೇಲೆ ಡಿಸಿಎಂ ಡಿಕೆಶಿ ಕಿಡಿ

BANGALORE: ಅಹಮದಾಬಾದ್ ವಿಮಾನ ದುರಂತ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ವಿಷಯವನ್ನು ರಾಜಕೀಯ ಅಂಶವನ್ನಾಗಿ ಮಾಡುವುದು ಕಾಂಗ್ರೆಸ್ ಶೈಲಿ ಅಲ್ಲ ಎಂದು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

“ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿಯ ಕೆಲಸ. ಜೆಡಿಎಸ್ ಕೂಡ ಇದೇ ಮಾರ್ಗವನ್ನು ಅನುಸರಿಸುತ್ತಿದೆ. ಆದರೆ ನಾವು ಅವರಂತೆ ಅದು ನೀಚ ರಾಜಕೀಯ ಮಾಡುವುದಿಲ್ಲ,” ಎಂದು ಡಿಕೆಶಿ ಗರಂ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಅಹಮದಾಬಾದ್ ವಿಮಾನ ದುರಂತ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅಹಮದಾಬಾದ್ ವಿಮಾನ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತೇ. ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ಬಿದ್ದಿದ್ರು, ಸಾವಿರಾರು ಮಂದಿಯ ಜೀವಹಾನಿಯಾಗ್ತಿತ್ತು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ ಎಂದು ಮಾಹಿತಿ ನೀಡಿದರು

 

Author:

...
Sushmitha N

Copy Editor

prajashakthi tv

share
No Reviews