BANGALORE : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದಿದ್ದಾರೆ.
ಬಿಡುಗಡೆಯಾದ ಬಳಿಕ ಮನು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ತಮ್ಮ ವಿರುದ್ಧ ನಡೆಯುತ್ತಿರುವ ಸಂಚಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು. "ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ, ನನಗೆ ಎದುರಾದ ಎಲ್ಲ ಸಂಗತಿಗಳನ್ನು ವಿವರಿಸುತ್ತೇನೆ. ಮೂರು ವರ್ಷಗಳ ಶ್ರಮ, ಪರಿಶ್ರಮ ಈ ಆರೋಪದಿಂದ ಹಾಳಾಗಿದೆ," ಎಂದು ದುಃಖ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾ ಕುರಿತು ಮಾತನಾಡಿರುವುದಾಗಿ ಹೇಳಲಾದ "ಆ ಆಡಿಯೋ ನನ್ನದು ಎಂದು ನಾನು ಒಪ್ಪಲ್ಲ. ಐದಾರು ಮಂದಿ ಸೇರಿಕೊಂಡು ನನ್ನ ವಿರುದ್ಧ ಪ್ಲಾನ್ ಮಾಡಿದ್ದಾರೆ ಎಂದು ಹೇಳಿದರು.
ಇನ್ನು ಅತ್ಯಾಚಾರ ಕೇಸ್ನಲ್ಲಿ ಕಾನೂನು ಹೋರಾಟ ಮಾಡುತ್ತೇನೆ, ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಮನು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.