BANGALORE : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ (Supplementary) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಒಟ್ಟು 87,330 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದರೆ, ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳಿಸಿದ್ದಾರೆ.
ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್ ಆಫ್ ಔಟ್ ಅಂಕ ಬಂದಿದೆ. ಕರ್ನಾಟಕದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ಎಸ್ಎಸ್ಎಲ್ ಪರೀಕ್ಷೆ-2 ನಡೆದಿತ್ತು. ಈ ಪೂರಕ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಆಧಿಕೃತ ವೆಬ್ಸೈಟ್ karresults.nic.in ನಲ್ಲಿ ಪರಿಶೀಲಿಸಬಹುದು.
ಇನ್ನು ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ "ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಿರಲಿ, ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸತತ ಪ್ರಯತ್ನವೇ ಯಶಸ್ಸಿನ ರಹಸ್ಯ ಎಂಬುದನ್ನು ಮರೆಯಬೇಡಿ," ಎಂದು ಬರೆದುಕೊಂಡು ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.