BANGALORE STAMPEDE: ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ₹25 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಈ ಹಿಂದೆ ಸಿಎಂ ಅವರು ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದರು. ಆದರೆ ಈ ಪರಿಹಾರ ಹೆಚ್ಚಿಸುವಂತೆ ಸ್ವಪಕ್ಷದವರು ಸೇರಿ ವಿಪಕ್ಷದವರು ಸರ್ಕಾರಕ್ಕೆ ಆಗ್ರಹಿಸಿದರು. ಇದೀಗ ಈ ಮೊತ್ತವನ್ನು ₹25 ಲಕ್ಷಕ್ಕೆ ಹೆಚ್ಚಿಸಿ ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಕುಟುಂಬಸ್ಥರು ಕಳೆದುಕೊಂಡದ್ದನ್ನು ಮರಳಿ ನೀಡಲಾಗುವುದಿಲ್ಲ. ಬದಲಾಗಿ ಭವಿಷ್ಯದ ದೃಷ್ಟಿಯಿಂದ ಸಹಾಯವಾಗುವ ದೃಷ್ಟಿಯಿಂದ ಸರ್ಕಾರ ಪರಿಹಾರ ಮೊತ್ತ ಹೆಚ್ಚಿಸಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಅರ್ ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದರೆ, 47 ಮಂದಿ ಗಾಯಗೊಂಡಿದ್ದರು, ಈ ಘಟನೆ ರಾಜ್ಯದಾದ್ಯಂತ ಆಕ್ರೋಶ ಹುಟ್ಟುಹಾಕಿದ್ದು, ಸಾರ್ವಜನಿಕರ ಭದ್ರತೆ ವಿಚಾರವಾಗಿ ಸರ್ಕಾರಕ್ಕೆ ಗಂಭೀರ ಪ್ರಶ್ನೆಗಳನ್ನೆತ್ತಿದೆ.
ಈ ಮೂಲಕ ಮೃತರಿಗೆ ಸರ್ಕಾರ, ರಾಯಲ್ ಚಾಲೆಂಸರ್ಜ್ ಬೆಂಗಳೂರು (RCB) ಪ್ರಾಂಚೈಸಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೇಟ್ ಅಸೋಸಿಯೇಷನ್ (KSCA) ಘೋಷಿಸಿದ ಎಲ್ಲ ಪರಿಹಾರ ಮೊತ್ತ ಸೇರಿ ಒಟ್ಟು 40,00,000 ಲಕ್ಷ ರೂಪಾಯಿ ಆಗುತ್ತದೆ.