BANGALORE STAMPEDE : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜೂನ್ 12 ರ ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ.
ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ತನಿಖಾ ವರದಿ ಸಲ್ಲಿಕೆಗೆ ಎಜಿ ಸಮಯಾವಕಾಶ ಕೋರಿ ವಾದ ಮಂಡಿಸಿದರು. ಜ್ಯುಡಿಷಿಯಲ್ ತನಿಖೆ ನಡೀತಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಆಗ್ತಿದೆ ಎಂದಿದ್ದಾರೆ. ಈ ವೇಳೆ ಪೀಠ, ಈಗ ಕೇಳಿದ್ದ ವರದಿ ಸಲ್ಲಿಕೆ ಮಾಡೋದಿಲ್ವಾ? ವರದಿ ಸಲ್ಲಿಸಲು ಏನು ಕಷ್ಟ ಎಂದು ಹಂಗಾಮಿ ಮುಖ್ಯ ನ್ಯಾ. ಕಾಮೇಶ್ವರ ರಾವ್ ಪ್ರಶ್ನೆ ಮಾಡಿದ್ದಾರೆ. ಅಲ್ದೇ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿದ್ದು, ಸಿಐಡಿ ತನಿಖೆ ಆರಂಭವಾಗಿದೆ ಎಂದು ಎಜಿ ತಿಳಿಸಿದ್ದಾರೆ.
ತನಿಖೆ ಮುಗಿಯಲು ಒಂದು ತಿಂಗಳು ಬೇಕು. ಕೆಲ ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸಲಾಗುತ್ತಿದೆ, ಅಲ್ಲದೇ ಕೋರ್ಟ್ ನೀಡುವ ಯಾವುದೇ ನಿರ್ದೇಶನ ಪಾಲಿಸಲು ಸರ್ಕಾರ ಸಿದ್ದವಾಗಿದೆ ಎಂದಿದ್ದಾರೆ. ಆದ್ರೆ ವರದಿ ಸಲ್ಲಿಸಲು ಕಾಲಾವಕಾಶ ನೀಡಿ ಎಂದು ಎಜಿ ಕೋರ್ಟ್ ಬಳಿ ಮನವಿ ಮಾಡಿದ್ದಾರೆ.
ಹೀಗಾಗಿ ಹೈಕೋರ್ಟ್, ವರದಿ ಸಲ್ಲಿಕೆಗೆ ಎರಡು ದಿನ ಮಾತ್ರ ಅವಕಾಶ ನೀಡಲಾಗುವುದು ಎಂದಿದೆ. ಅದಕ್ಕಿಂತ ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ. ಜೂನ್ 12 ರೊಳಗೆ ವರದಿ ನೀಡಿ ಎಂದು ಹೈಕೋರ್ಟ್ ಆದೇಶ ನೀಡಿದೆ.