BANGALORE: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ, ರಾಜ್ಯ ಬಿಜೆಪಿ ಜೂನ್ 17ರಂದು ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಬಿಜೆಪಿ ಪಕ್ಷದ ವರಿಷ್ಠರು ಈ ತೀರ್ಮಾನವನ್ನು ಘೋಷಿಸಿದ್ದು, ಸಾರ್ವಜನಿಕ ರಕ್ಷಣೆ ವೈಫಲ್ಯಕ್ಕೆ ಸರ್ಕಾರವೇ ಹೊಣೆದಾರವಾಗಿದೆ ಎಂಬ ಆರೋಪವನ್ನು ಮುಂದಿಟ್ಟು, ಸರ್ಕಾರದ ವಿರುದ್ಧ ದಿಟ್ಟ ನಿಲುವು ತೆಗೆದುಕೊಂಡಿದ್ದಾರೆ.
ಘಟನೆಯಿಂದ ಸಾಕಷ್ಟು ಅಮೂಲ್ಯ ಜೀವಗಳು ಹಾನಿಯಾಗಿದ್ದು, ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣ. ಅಲ್ಲದೇ ದುರಂತದ ಬಳಿಕವೂ ಪ್ರಾಮಾಣಿಕ ತನಿಖೆ ಇಲ್ಲದೇ, ಸಾರ್ವಜನಿಕರ ಆಕ್ರೋಶವನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿಯು ಆರೋಪಿಸಿದೆ. ಈ ಹಿನ್ನೆಲೆಯಲ್ಲಿ, ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದೆ.