ಬೆಳಗಾವಿ : ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ಮತ್ತೊಂದು ಸ್ಫೋಟಕ ಭವಿಷ್ಯ ನುಡಿದ್ದಾರೆ. ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೆಗಾಸ್ಪೋಟ ಸಂಭವಿಸಿ ಸಾವು ನೋವು ಹೆಚ್ಚಾಗಲಿದೆ. ಅರಸನ ಅರಮನೆಗೆ ಕಾರ್ಮೋಡ ಕವಿದಿದೆ ಎನ್ನುವ ಮೂಲಕ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದ್ದು, ಹಿಮಾಲಯ ಪರ್ವತ ಕರಗಿ ದೆಹಲಿವರೆಗೆ ತಲುಪಲಿದೆ ಎಂದಿದ್ದು, ಮೆಗಾಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸುವ ಸಾಧ್ಯತೆ ಇದ್ದು, ಮತೀಯ ಗಲಭೆಗಳು ಹೆಚ್ಚಾಗಲಿವೆ ಎಂದು ಸ್ವಾಮೀಜಿ ಎಚ್ಚರಿಸಿದ್ದಾರೆ.
ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದ್ದು, ಜನರಲ್ಲಿ ಅಶಾಂತಿ ಮೂಡಿ, ಕೆಲವು ದೇಶಗಳು ಅಳಿದು, ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಇನ್ನು ರಾಜ್ಯ ರಾಜಕಾರಣದ ಬಗ್ಗೆ ಅವರು ಹೇಳಿದ್ದು ಈಗೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸಂಕ್ರಾಂತಿಯ ಭವಿಷ್ಯ ನೋಡಿಕೊಂಡು ಮುಂದೆ ಏನಾಗುತ್ತೆ ನೋಡಬೇಕು ಎಂದು ಕೋಡಿಮಠದ ಸ್ವಾಮೀಜಿ ಹೇಳಿದರು. ಒಟ್ಟಿನಲ್ಲಿ ಕೋಡಿ ಶ್ರೀಗಳ ಭವಿಷ್ಯ ಜನರನ್ನಷ್ಟೆ ಅಲ್ಲದೆ ಇಡೀ ವಿಶ್ವದ ಪರಿಸ್ಥಿತಿ ಕುರಿತು ಹೇಳಿರುವ ಭವಿಷ್ಯ ಎಲ್ಲೆಡೆ ಸಂಚಲನ ಮೂಡಿಸುತ್ತಿದೆ.