ಬೆಂಗಳೂರು : ಬೆಂಗಳೂರಿನ ರಾಜಗೋಪಾಲ ನಗರದ ಭಾಗ್ಯರಾಜ್ ಬಾರ್ ಬಳಿ ಕುಡಿದ ಮತ್ತಿನಲ್ಲಿ ಶುರುವಾದ ಜಗಳ ಕೊಲೆಯೊಂದಿಗೆ ಅಂತ್ಯಗೊಂಡಿದ್ದು, 51 ವರ್ಷದ ರಂಗನಾಥ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿನಯ್ ಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ರಂಗನಾಥ್ ಹಾಗೂ ವಿನಯ್ ಇಬ್ಬರು ಆಟೋ ಡ್ರೈವರ್ ಗಳಾಗಿದ್ದು, ಇಬ್ಬರು ಜೊತೆಯಲ್ಲಿ ಮದ್ಯ ಸೇವಿಸಿದ್ದಾರೆ. ಬಳಿಕ ಇಬ್ಬರ ನಡುವೆ ಕ್ಷುಲಕ ವಿಚಾರಕ್ಕಾಗಿ ಗಲಾಟೆ ಶುರುವಾಗಿದ್ದು, ಮಾತಿನಿಂದ ಶುರುವಾದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ವಿನಯ್ ದೊಣ್ಣೆ ಮತ್ತು ಕಲ್ಲಿನಿಂದ ರಂಗನಾಥ್ ಮೇಲೆ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ರಂಗನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.