ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬಿ.ಕೆ. ಹರಿಪ್ರಸಾದ್ ಮನೆಗೆ ಅಚಾನಕ್ ಭೇಟಿ | ರಾಜಕೀಯ ವಲಯದಲ್ಲಿ ಕುತೂಹಲ

ಬೆಂಗಳೂರು : ಮುಗಿಯದಂತಿರುವ ರಾಜ್ಯ ಕಾಂಗ್ರೆಸ್‌ನ ಆಂತರಿಕ ರಾಜಕೀಯ ಸಂಚಲನ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಸದಾಶಿವನಗರದ ನಿವಾಸಕ್ಕೆ ಅಚಾನಕ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೊಂದಿರುವ ಹರಿಪ್ರಸಾದ್ ಅವರು ಈ ಹಿಂದೆ ಹಲವು ಬಾರಿ ಸಿದ್ದರಾಮಯ್ಯನವರ ವಿರುದ್ಧ ತೀಕ್ಷ್ಣ ಅಸಮಾಧಾನ ವ್ಯಕ್ತಪಡಿಸಿದ್ದರು. ಇತ್ತೀಚಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೇವಾಲ ಅವರು ಸಿಎಂ ಸಿದ್ದರಾಮಯ್ಯ ಜತೆ ಸಭೆ ನಡೆಸಿದ ಬೆನ್ನಲ್ಲೇ ಈ ಭೇಟಿಯಾಗಿರುವುದು ಹಲವು ಚರ್ಚೆಗೆ ಕಾರಣವಾಗಿದೆ.

ಈಗಾಗಲೇ ಸಂಪುಟ ಪುನರಚನೆಯ ಅಗತ್ಯವಿದೆ ಎಂಬ ಮಾತುಗಳು ಪಕ್ಷದೊಳಗೇ ಕೇಳಿಬರುತ್ತಿವೆ. ಈಗ ದಿಢೀರ್‌ ಆಗಿ ಹರಿಪ್ರಸಾದ್‌ ಅವರನ್ನು ಭೇಟಿಯಾಗಿದ್ದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎರಡೂವರೆ ವರ್ಷದ ಪವರ್ ಶೇರಿಂಗ್ ಟಾಕ್ ನಡುವೆಯೇ ಅಸಮಧಾನಿತರನ್ನ ಒಗ್ಗೂಡಿಸಿ ಮಾಸ್ಟರ್ ಸ್ಟ್ರೋಕ್ ಕೊಡಲು ಸಿಎಂ ಮುಂದಾಗುತ್ತಿದ್ದಾರಾ ಎಂಬ ಚರ್ಚೆಯೂ ಆರಂಭವಾಗಿದೆ.

Author:

...
Sushmitha N

Copy Editor

prajashakthi tv

share
No Reviews