ಬೆಂಗಳೂರು : ನಗರದ ಜನತೆಗೆ ಈಗ ಮತ್ತೆ ಕೊರೊನಾದ ಭೀತಿಯ ಹಾವಳಿ ಎದುರಾಗುತ್ತಿದೆ. ಡೆಂಗ್ಯೂ ಜ್ವರದ ಪ್ರಭಾವ ಇನ್ನೂ ಕಡಿಮೆಯಾಗದೆ ಇರುವಾಗಲೇ, ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಕೋವಿಡ್ ಸೋಂಕಿತರ ಸಂಖ್ಯೆ 150ರ ಗಡಿ ದಾಟಿದೆ.
ಈಗಾಗಲೇ ಡೆಂಗ್ಯೂ ಪ್ರಕರಣಗಳ ಪ್ರಮಾಣದಲ್ಲಿ ಹೆಚ್ಚಾಗಿರುವುದರಿಂದ, ಆರೋಗ್ಯ ಇಲಾಖೆ ಹಲವು ಪ್ರದೇಶಗಳಲ್ಲಿ ಮಳೆ ನೀರಿನ ನಿಲ್ಲಿಕೆ ತಪಾಸಣೆ, ಲಾರ್ವಾ ನಿಯಂತ್ರಣ ಮುಂತಾದ ಕ್ರಮಗಳನ್ನು ಕೈಗೊಂಡಿದೆ. ಇದೀಗ ಕೊರೊನಾ ಪ್ರಕರಣಗಳ ಏರಿಕೆಯೊಂದಿಗೆ ಆಸ್ಪತ್ರೆಗಳ ಮೇಲಿನ ಒತ್ತಡವೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಐಎಲ್ ಮತ್ತು ಸಾರಿ ಕೇಸ್ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ.
ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ (BBMP) ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಆರೋಗ್ಯ ಇಲಾಖೆ ನಿರಂತರವಾಗಿ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಿದ್ದು, ಅಗತ್ಯವಿದ್ದರೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲು ಸಿದ್ಧವಾಗಿದೆ.
ಇನ್ನೂ ಡೆಂಗ್ಯೂ ಜೊತೆಗೆ ಕೋವಿಡ್ ಕಂಟ್ರೋಲ್ ಮಾಡಲು ಬಿಬಿಎಂಪಿ ಹಲವು ಕ್ರಮ ವಹಿಸುತ್ತಿದೆ. ಐಎಲ್ಐ ಮತ್ತು ಸಾರಿ ಕೇಸ್ಗಳ ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.