BANGALORE : ಬೆಂಗಳೂರು ಕಾಲ್ತುಳಿತ ಪ್ರಕರಣ | ಆರ್ಸಿಬಿಗೆ ಹೈಕೋರ್ಟ್ ನೋಟಿಸ್

BANGALORE NEWS : ಬೆಂಗಳೂಇನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಆರ್ಸಿಬಿ (RCB), ಕರ್ನಾಟಕ ಕ್ರಿಕೆಟ್ ಸಂಸ್ಥೆ (KSCA) ಮತ್ತು ಡಿಎನ್ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (Public Interest Litigation) ವಿಚಾರಣೆಯು ಇಂದು (ಜೂನ್ 17) ನಡೆದಿದ್ದು, ರಾಜ್ಯ ಸರ್ಕಾರ ಈವರೆಗೂ ತೆಗೆದುಕೊಂಡಿರುವ ಕ್ರಮಗಳ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ. "ತನಿಖೆ ಇನ್ನೂ ಮುಕ್ತಾಯವಾಗಿಲ್ಲ, ಯಾರ ಮೇಲೂ ಪೂರ್ವಾಗ್ರಹದಿಂದ ಅಭಿಪ್ರಾಯ ವ್ಯಕ್ತಪಡಿಸಬಾರದು" ಎಂಬ ಕಾರಣ ನೀಡಿ ವರದಿ ಬಹಿರಂಗಪಡಿಸುವುದಿಲ್ಲ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಅದಾದರೂ, ಕೆಲ ಅರ್ಜಿದಾರರು ಸರ್ಕಾರದ ವರದಿಯನ್ನು ಬಹಿರಂಗಪಡಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. "ಸರ್ಕಾರ ಪಾರದರ್ಶಕವಾಗಿರಬೇಕು, ಮಾಹಿತಿಯ ಹಕ್ಕನ್ನು ಗೌರವಿಸಬೇಕು" ಎಂದು ಅವರು ವಾದಿಸಿದ್ದು, "ಇಲಿ-ಬೆಕ್ಕಿನ ಆಟ ಸರಿಯಲ್ಲ" ಎಂಬ ತೀಕ್ಷ್ಣ ಟೀಕೆಯೂ ವ್ಯಕ್ತಪಡಿಸಿದರು. ಇದರ ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಲಾಗಿದೆ. ಆ ವೇಳೆಗೆ ಮುಚ್ಚಿದ ಲಕೋಟೆಯ ಕುರಿತ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

 

Author:

...
Keerthana J

Copy Editor

prajashakthi tv

share
No Reviews