HASSAN NEWS : Chinnaswamy Stadium ಬಳಿ ಜೂನ್ 4ರಂದು ನಡೆದ ಕಾಲ್ತುಳಿತ [Stamped] ದುರಂತದಲ್ಲಿ 11 ಮಂದಿ ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಈ ದುರಂತದಿಂದ ರಾಜ್ಯದಾದ್ಯಂತ ದುಃಖದ ಛಾಯೆ ಹರಡಿದ್ದು, ಹಾಸನದ ಭೂಮಿಕ್ [Bhumik] ತಂದೆಯ ದುಃಖ ಎಂತವರ ಹೃದಯವನ್ನೂ ಮುರಿಯುವಂತಿದೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು [Kuppagodu] ಗ್ರಾಮದ ನಿವಾಸಿ ಲಕ್ಷ್ಮಣ್ [Lakshman] ತಮ್ಮ ಮಗ ಭೂಮಿಕ್ನ್ನು ಈ ಕಾಲ್ತುಳಿತದಲ್ಲಿ ಕಳೆದುಕೊಂಡಿದ್ದಾರೆ. ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಸ್ವಂತ ಉದ್ಯಮ ಮಾಡಿಕೊಂಡು ಸಾಕಷ್ಟು ಸಂಪಾದನೆ ಮಾಡಿ ದೊಡ್ಡ ಮಟ್ಟಕ್ಕೆ ಬಂದಿದ್ದ ಲಕ್ಷ್ಮಣ್ ಮಗನಿಗಾಗಿ ಸಾಕಷ್ಟು ಕನಸು ಕಂಡಿದ್ದರು, ಮಗನೂ ಕೂಡ ಎಂದು ತಂದೆಗೆ ವಿರುದ್ದವಾಗಿ ಮಾತನಾಡದೆ, ತಂದೆಯ ಮಾರ್ಗದರ್ಶನದಂತೆ ನಡೆಯುತ್ತಿದ್ದನು. ಆದರೆ ಕಳೆದ ಜೂನ್ 4ರಂದು Chinnaswamy stadium ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ BHUMIK ಸಾವನ್ನಪ್ಪಿದ್ದನು. ಅಂದಿನಿಂದ ಮಗ ಇಲ್ಲದನ್ನು ನೆನೆದು ಕಣ್ಣೀರಿಡುತ್ತಿರುವ ಭೂಮಿಕ್ ತಂದೆ. ಮಗನ ಸಾವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ. ಕಣ್ಣೀರುಡುತ್ತಿದ್ದಾರೆ.
"ನಾನು ನನ್ನ ಮಗನ ಜೊತೆ ದೊಡ್ಡ ಕನಸುಗಳನ್ನು ಕಟ್ಟಿಕೊಂಡಿದ್ದೆ… ಅವನು ಯಾವತ್ತೂ ನನಗೆ ವಿರೋಧ ಮಾತಾಡಿಲ್ಲ… ಈಗ ನಾನು ಯಾರಿಗಾಗಿ ಬದುಕಬೇಕು?" ಎಂದು ಸಮಾಧಿಯ ಮೇಲೆ ಬಿದ್ದು ಹೊರಳಾಡಿರುವ ಭೂಮಿಕ್ ತಂದೆ ಆಕ್ರಂದನ ಮುಗಿಲು ಮುಟ್ಟಿದ್ದು. ಈ ಪರಿಸ್ಥಿತಿ ಯಾವ ತಂದೆಗೂ ಬರಬಾರದು ಎಂದು ಗೋಳಾಡಿದ್ದಾರೆ.