CHAMARAJANAGARA : ಕೆರೆಯ ತಡೆಗೋಡೆಗೆ ಬೈಕ್ ಡಿಕ್ಕಿ | ಓರ್ವ ಮೃತ್ಯು, ಇನ್ನೋರ್ವ ಗಂಭೀರ

CHAMARAJANAGARA NEWS : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಬೈಕ್ ತಡೆಗೋಡೆಗೆ ಟಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟಿದ್ದಾನೆ ಮತ್ತು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಈ ಘಟನೆಯಲ್ಲಿ ಕಾಮಗೆರೆ ಗ್ರಾಮದ ಪವನ್ (19) ಮೃತಪಟ್ಟಿದ್ದಾನೆ. ಜೊತೆಗಿದ್ದ ವಿಶ್ವ (20) ಎಂಬ ಯುವಕ ತೀವ್ರ ಗಾಯಗಳೊಂದಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ತೀವ್ರ ನಿಗಾವಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರೂ ಯುವಕರು ಕೊಳ್ಳೇಗಾಲದಿಂದ ಕಾಮಗೆರೆ ಕಡೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಮಧುವನಹಳ್ಳಿ ಹೊರವಲಯದ ಕೆರೆ ಬಳಿ ಅಳವಡಿಸಿದ್ದ ಸುರಕ್ಷಾ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದಿದೆ. ವೇಗದ ಬಲೆಗಿದ್ದ ಕಾರಣ ಬೈಕ್ ಸಂಪೂರ್ಣ ನಾಶವಾಗಿದ್ದು, ಪವನ್ ಸ್ಥಳದಲ್ಲೇ ಪ್ರಾಣತ್ಯಾಗ ಮಾಡಿದ್ದಾರೆ.

ಇನ್ನು ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Author:

...
Keerthana J

Copy Editor

prajashakthi tv

share
No Reviews