CHIKKANAYAKANAHALLI NEWS : ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕು, ಕೆಂಕೆರೆ ಗ್ರಾಮದಲ್ಲಿ ಒಂದು ಭೀಕರ ಅಪಘಾತ ಸಂಭವಿಸಿದೆ.
ಪುರದ ಮಠದ ಚನ್ನಬಸವೇಶ್ವರ ದೇವಸ್ಥಾನ ರಸ್ತೆಯಲ್ಲಿ ಅಪರಿಚಿತ ವಾಹನ ಒಂದು ಬೈಕ್ನ್ನು ಹಿಂಬದಿ ದಿಂದ ಗುದ್ದಿತು. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಚನ್ನಬಸವಯ್ಯ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬ ಸ್ಥಳೀಯ ನಿವಾಸಿ ಲೋಕೇಶ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಹಾಸನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನ್ನು ಘಟನೆ ಬಗ್ಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನ ಮತ್ತು ಚಾಲಕನ ಪರಿಶೀಲನೆ ಮುಂದುವರೆಯುತ್ತಿದೆ.