RAICHURU : ಮಣ್ಣಿನ ರಾಶಿಗೆ ಬೈಕ್ ಡಿಕ್ಕಿ |ಸವಾರ ದುರ್ಮರಣ, ಇಬ್ಬರು ಗಂಭೀರ

RAICHURU NEWS : ರಸ್ತೆಯ ಪಕ್ಕದಲ್ಲಿ ಹಾಕಿದ ಮಣ್ಣಿನ ರಾಶಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಂದು ಜೀವ ಹಾರಿಹೋಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಇಜೆ ಬಸಾಪುರ ಕ್ಯಾಂಪ್ ಬಳಿ ನಡೆದಿದೆ.

ಅಪಘಾತದಲ್ಲಿ ಮೃತರಾದ ವ್ಯಕ್ತಿಯನ್ನು ಗಿರೀಶ (26) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಇದ್ದ ಮತ್ತಿಬ್ಬರು, ರಾಜಾ ಮತ್ತು ಅಕ್ಬರ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳು ರಾಜಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ಹಾಗೂ ಅಕ್ಬರ್ ಅವರನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇನ್ನು ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಣ್ಣು ರಾಶಿ ಯಾರು ಹಾಕಿದ್ದರು? ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆಯೇ? ಎಂಬ ವಿಷಯದ ತನಿಖೆ ಪ್ರಾರಂಭವಾಗಿದೆ.

Author:

...
Keerthana J

Copy Editor

prajashakthi tv

share
No Reviews