BANGALORE : ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಮುಂದಾದ ಬಿಜೆಪಿ

BANGALORE NEWS : ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಜೆಪಿ ಶಾಸಕರ ಒಂದು ತಿಂಗಳ ಸಂಬಳ ನೀಡಲಾಗುವುದು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಮೃತಪಟ್ಟ ಕಷ್ಟದಲ್ಲಿರುವ ಕುಟುಂಬಗಳಿಗೆ ತಿಂಗಳ ಸಂಬಳ ತಲುಪಿಸುತ್ತೇವೆ. ಮೃತರ ಕುಟುಂಬದವರ ಮನೆಗಳಿಗೆ ಭೇಟಿ ನೀಡುತ್ತೇವೆ. ನಮ್ಮ ಶಾಸಕರು, ವಿಧಾ ಪರಿಷತ್‌ ಸದಸ್ಯರು ಮೃತರ ಮನೆಗಳಿಗೆ  ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳಲಿದ್ದಾರೆ. ಒಂದು ತಿಂಗಳ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಕಾಲ್ತುಳಿದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಇದು ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ. ನಾವು ಪೋಲೀಸರ ಜೊತೆಗೆ ಇದ್ದೇವೆ ಎಂದು ಅಶೋಕ್‌ ಹೇಳಿದ್ದಾರೆ.

Author:

...
Keerthana J

Copy Editor

prajashakthi tv

share
No Reviews