ತುಮಕೂರು : ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರೋ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿದ್ದು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆಗೆ ನಡೆಸ್ತಿದ್ದಾರೆ. ತುಮಕೂರಿನಲ್ಲಿ ಶಾಸಕ ಸುರೇಶ್ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ಮುಖಂಡ ಸದಾಶಿವಯ್ಯ ಸೇರಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು.
ನಗರದ ಜಿಲ್ಲಾಸ್ಪತ್ರೆ ಮುಂಭಾಗ ಜಮಾಯಿಸಿದ ಕಾರ್ಯಕರ್ತರು, ಕಪ್ಪು ಪಟ್ಟಿ ಧರಿಸಿ ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಸುರೇಶ್ಗೌಡ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡಜನರ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡುತ್ತಿದೆ. ಜನೌಷಧಿ ಕೇಂದ್ರಗಳನ್ನ ಮುಚ್ಚುವ ಮೂಲಕ ಬಡವರಿಗೆ ಸಿಕ್ಕುವ ಔಷಧಿಗಳನ್ನು ಲಭಿಸದಂತೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ನೂರಾರು ಬಡರೋಗಿಗಳು ಸಾವು-ಬದುಕಿನ ನಡುವೆ ಹೋರಾಡಬೇಕಾಗುತ್ತಿದೆ, ಜನರ ಆರೋಗ್ಯ ಮತ್ತು ಜೀವನದೊಂದಿಗೆ ಈ ಸರ್ಕಾರ ಆಟ ಆಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ರು. ಅಲ್ದೇ ಆದೇಶ ಹಿಂಪಡೆಯದಿದ್ರೆ ಮುಂದಿನ ದಿನಗಳಲ್ಲಿ ಉಗಹ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ರು.
ಇನ್ನು ತುಮಕೂರು ಬಿಜೆಪಿ ಘಟಕದ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಮಾತನಾಡಿ, ಕರ್ನಾಟಕ ಸರ್ಕಾರ ಸತ್ತು ಹೋಗಿದೆ. ಸಾರ್ವಜನಿಕರಿಗೆ ಲಭ್ಯವಾಗಬೇಕಾದ ಔಷಧಿಗಳನ್ನು ದೊರಕಿಸದಿದ್ದರೆ ಈ ವಿಷಯ ದೊಡ್ಡ ಹೋರಾಟಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಎಚ್ಚರಿಕೆ ನೀಡಿದ್ರು.
ಕಪ್ಪು ಪಟ್ಟಿ ಧರಿಸಿ ಹೋರಾಟ ಮಾಡಿದ ಬಿಜೆಪಿ ನಾಯಕರು ಕೂಡಲೇ ಜನೌಷಧಿ ಕೇಂದ್ರಗಳ ಮೇಲಿನ ಆದೇಶವನ್ನು ಹಿಂಪಡೆಯಬೇಕು, ಇಲ್ಲವಾದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ರು.