TUMAKURU: ತುಮಕೂರು ನಗರದ ಹೊರವಲಯದಲ್ಲಿರುವ ಕ್ಯಾತಸಂದ್ರ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ಸುಮಾರು 30 ವರ್ಷದ ಅಪರಿಚಿತ ಯುವಕನ ಶವ ಪತ್ತೆಯಾಗಿದ್ದು, ಹದ್ದು ಹಾರದ ಅನುಮಾನ ಮನೆಮಾಡಿದೆ. ರೈಲಿಗೆ ಸಿಲುಕಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಯುವಕನ ಶವವು ನಿಲ್ದಾಣದ ಪಕ್ಕದಲ್ಲಿ ಪತ್ತೆಯಾಗಿದ್ದು, ಘಟನೆ ಕುರಿತು ಕೂಡಲೇ ರೈಲ್ವೆ ಪೊಲೀಸರಿಗೆ ತಿಳಿಸಲಾಯಿತು. ರೈಲ್ವೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ತುಮಕೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಮೃತನ ಗುರುತು ಇಲ್ಲದ ಕಾರಣ ತನಿಖೆ ಮುಂದುವರೆದಿದೆ. ಶವವನ್ನು ಪೋಸ್ಟ್ಮಾರ್ಟಂಗಾಗಿ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಗಿದ್ದು, ಸಾವಿಗೆ ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿದುಬರಬೇಕಿದೆ.