MANGALORE : ಹೆದ್ದಾರಿ ತಡೆಗೋಡೆಗೆ ಕಾರು ಡಿಕ್ಕಿ | ಇಬ್ಬರು ಯುವಕರು ದುರ್ಮರಣ

MANGALORE NEWS : ಮಂಗಳೂರಿನ ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎನ್ಎಸ್ಯುಐ (NSUI) ಮುಖಂಡ ಓಂ ಶ್ರೀ ಮತ್ತು ಕದ್ರಿಯ ಅಮನ್ ರಾವ್ ಎಂಬ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಹೆದ್ದಾರಿ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕಾರ್ಯಕರ್ತರಾದ ಓಂ ಶ್ರೀ ಮತ್ತು ಅಮನ್ ರಾವ್ ಇಬ್ಬರೂ ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆಗಳಲ್ಲಿ ತೊಡಗಿದ್ದವರು ಎನ್ನಲಾಗಿದೆ. ಅಪಘಾತದ ಹೊತ್ತಿಗೆ ಕಾರಿನಲ್ಲಿ ಐವರು ಯುವಕರು ಪ್ರಯಾಣಿಸುತ್ತಿದ್ದರು. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಇನಗನು ಅಪಘಾತದಲ್ಲಿ ವಂಶಿ ಮತ್ತು ಆಶಿಕ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿ ಇದ್ದ ಮತ್ತೊಬ್ಬ ಇಟಲಿ ಮೂಲದ ಯುವಕ ಜೆರ್ರಿ ಅಪಾಯದಿಂದ ಪಾರಾಗಿದ್ದಾರೆ. ಇನಗನು ಈ ಸಂಬಂಧ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದೆ.

Author:

...
Keerthana J

Copy Editor

prajashakthi tv

share
No Reviews