RAICHURU NEWS : ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ರಾಯಚೂರಿನ ಯರಗೇರಾ ಬಳಿ ಸಂಭವಿಸಿದೆ.
ಯರಗೇರಾದ ಮಂತ್ರಾಲಯ - ರಾಯಚೂರು ಸಂಪರ್ಕ ಕಲ್ಪಿಸುವ ರಸ್ತೆಯ ರಾಯಚೂರು ವಿಶ್ವವಿದ್ಯಾಲಯ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಉರುಕುಂದ ಗ್ರಾಮದ ಈರಣ್ಣ ಉರುಕುಂದ (42) ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಸ್ನೇಹಿತ ಲಕ್ಷ್ಮಣ ತಿಮ್ಮಪ್ಪ ಚಿಕಿತ್ಸೆ ಫಲಕಾರಿಯಾಗದೆ ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಕೆಲಸದ ನಿಮಿತ್ತ ಉರುಕುಂದ ಹಾಗೂ ಸ್ನೇಹಿತನ ಜೊತೆಗೂಡಿ ರಾಯಚೂರು ನಗರಕ್ಕೆ ಆಗಮಿಸಿದ್ದರು. ಊರಿಗೆ ಹಿಂತಿರುಗುವಾಗ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಈರಣ್ಣ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನು ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.