ನೆಲಮಂಗಲ : ಕೆಕೆಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ | ಓರ್ವ ಸಾವು

ನೆಲಮಂಗಲ : ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ (KKRTC) ಬಸ್ಸಿಗೆ ಕಾರು ಡಿಕ್ಕಿಯಾದ ಪರಿಣಾಮ, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ನೆಲಮಂಗಲ ತಾಲ್ಲೂಕಿನ ತೊಣಚಿನಕುಪ್ಪೆ ಪ್ರವಾಸಿ ಡಾಬಾದ ಬಳಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಇನ್ನು ವೇಗವಾಗಿ ಬಂದ ಕಾರು, ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಓಬಳಾರೆಡ್ಡಿ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದೀಗ ಸದ್ಯ ಮಾಹಿತಿ ಪ್ರಕಾರ, ಕಾರಿನಲ್ಲಿದ್ದ ಇನ್ನಿಬ್ಬರು ಪ್ರಯಾಣಿಕರು, ಸುನಿಲ್ ಮತ್ತು ದಿವ್ಯ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆಯ ಬಗ್ಗೆ ಮಾಹಿತಿ ಪಡೆದ ನೆಲಮಂಗಲ ಸಂಚಾರಿ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Author:

...
Keerthana J

Copy Editor

prajashakthi tv

share
No Reviews