ಚನ್ನಪಟ್ಟಣ :
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ನಾಲ್ವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಪಾಂಡುಪುರ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಹೆಬ್ಬಾಳ ಮೂಲದ ನಿವಾಸಿ ಮೋಹನ್ ಎಂಬುವರು ಮೃತ ದುರ್ದೈವಿಯಾಗಿದ್ದಾರೆ.
ಬೆಂಗಳೂರಿನಿಂದ ಐವರು ಸ್ನೇಹಿತರು ಕಾರಿನಲ್ಲಿ ಕಬ್ಬಾಳು ದೇವಸ್ಥಾನಕ್ಕೆ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಇನ್ನು ಡಿಕ್ಕಿಯ ರಭಸಕ್ಕೆ ಮೋಹನ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದರೆ, ಕಾರಿನಲ್ಲಿದ್ದ ನಾಲ್ವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನಾ ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಆಸ್ಪತ್ರೆಗೆ ರವಾನಿಸಿ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಸದ್ಯ ಈ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.