UDUPI NEWS : ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ದಾರುಣ ಘಟನೆ ನಡೆದಿದೆ. ಕೇವಲ ಒಂದು ವರ್ಷದ ಮಗು ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆ ಸುತ್ತಿಕೊಂಡ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದೆ.
ಇನ್ನು ಈ ಘಟನೆ ಪುತ್ತೂರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿರುವ ಅಯ್ಯಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಕೇವಲ ಒಂದು ವರ್ಷದ ಪುಟ್ಟ ಮಗು ಕಾಳಮ್ಮ ಮೃತ ದುರ್ದೈವಿಯಾಗಿದೆ. ಅಯ್ಯಪ್ಪ ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಘಟನೆ ನಡೆದ ದಿನ ಬೆಳಿಗ್ಗೆ ಪತ್ನಿ ಮಗುವನ್ನು ಜೋಳಿಗೆಯಲ್ಲಿ ಮಲಗಿಸಿ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು.
ಆದರೆ ಕೆಲಸ ಮುಗಿಸಿ ಮನೆಗೆ ಮರಳಿದಾಗ ನೋಡಿದಾಗ ಜೋಳಿಗೆಗೆ ಕಟ್ಟಿದ್ದ ಸೀರೆ ಮಗು ಕುತ್ತಿಗೆಗೆ ಸುತ್ತಿಕೊಂಡು ಉಸಿರುಗಟ್ಟಿ ಮೃತ ಪಟ್ಟಿತ್ತು. ಆಘಾತಕಾರಿ ವಿಷಯವೆಂದರೆ, ಮಗು ಜೋಲಿಗೆಯಿಂದ ಕೆಳಗಿಳಿಯಲು ಯತ್ನಿಸಿದಾಗ ಅಥವಾ ನಿದ್ರಾ ಸ್ಥಿತಿಯಲ್ಲಿ ಜೋಲಿಯಿಂದ ಬಿದ್ದು ಈ ದುರಂತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಇನ್ನು ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟು ತನಿಖೆ ನಡೆಯುತ್ತಿದೆ.