ಮಂಡ್ಯ : ಟ್ರಾಫಿಕ್ ಪೊಲೀಸರ ಅಸವಧಾನ ಕ್ರಮ ಮತ್ತೊಂದು ಅಮೂಲ್ಯ ಜೀವವನ್ನ ಕಸಿದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೊರವನಹಳ್ಳಿಯ ವಾಣಿ ಮತ್ತು ಅಶೋಕ್ ದಂಪತಿಯ ಮೂವರೆ ವರ್ಷದ ಮಗಳು ಹೃತೀಕ್ಷಾ, ಪೊಲೀಸ್ ಯಡವಟ್ಟಿಗೆ ಬಲಿಯಾದ ದುರ್ಘಟನೆ ಸ್ವರ್ಣಸಂದ್ರದ ಹಳೆಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ.
ಮಗಳು ಹೃತಿಕ್ಷಾಗೆ ನಾಯಿ ಕಚ್ಚಿದ್ದರಿಂದ ತಾತ್ಕಾಲಿಕ ಚಿಕಿತ್ಸೆಗೆ ಮಿಮ್ಸ್ ಆಸ್ಪತ್ರೆಗೆ ಪೋಷಕರು ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಆದರೆ ಮಾರ್ಗಮಧ್ಯದಲ್ಲಿ ಪೊಲೀಸ್ ಅಧಿಕಾರಿಗಳು ಹೆಲ್ಮೆಟ್ ತಪಾಸಣೆಯ ನೆಪದಲ್ಲಿ ಬೈಕ್ ತಡೆದಿದ್ದಾರೆ. ಇದೇ ವೇಳೆ ಬೈಕ್ನಲ್ಲಿದ್ದ ತಂದೆ, ತಾಯಿ ಹಾಗೂ ಮಗು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಹೃತೀಕ್ಷಾ ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೂ, ಮುದ್ದಾದ ಮಗುವನ್ನು ಕಳೆದುಕೊಂಡು ಪೋಷಕರು ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಶವವಿಟ್ಟು ಅಳುತ್ತಿದ್ದಾರೆ. ಪೊಲೀಸರ ನಡೆಗೆ ಸಾರ್ವಜನಿಕರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇನ್ನು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜನತೆ ಸರಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಾಯಿಸಿದ್ದಾರೆ.