ಬೆಂಗಳೂರು : ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ ಮಕ್ಕಳಿಗೆ ಶುಭ ಕೋರಿದ ಸಿಎಂ

ಬೆಂಗಳೂರು : ಹೊಸ ಶೈಕ್ಷಣಿಕ ವರ್ಷಕ್ಕೆ ರಾಜ್ಯಾದ್ಯಂತ ಶಾಲೆಗಳು ಇಂದು ಪುನರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಆಡುಗೋಡಿಯಲ್ಲಿನ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪ್ರತಿಭಾಶಾಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, "ನೂರಾರು ಕನಸುಗಳನ್ನು ಹೊತ್ತು ಶಾಲೆಯತ್ತ ಹೆಜ್ಜೆ ಇಡುತ್ತಿರುವ ಮಕ್ಕಳು ನಮ್ಮ ಭವಿಷ್ಯ. ಅವರ ಶಿಕ್ಷಣಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ," ಎಂದು ತಿಳಿಸಿದರು.

ರಾಜ್ಯಾದ್ಯಂತ ಶಾಲೆಗಳು ಇಂದು ಮತ್ತೆ ತೆರೆದು, ರಜೆಯ ಮಜಾದಿಂದ ಹೊರಬಂದ ಮಕ್ಕಳು ಪಠಶಾಲೆಯತ್ತ ಮುಖ ಮಾಡಿದ್ದಾರೆ. ವಿದ್ಯಾರ್ಥಿಗಳಲ್ಲಿಯ ಕಲಿಕೆಯ ಚಟುವಟಿಕೆಗಳಿಗೆ ನೂತನ ಉತ್ಸಾಹ ತುಂಬಿದ ಮುಖ್ಯಮಂತ್ರಿಗಳು, "ಶಿಕ್ಷಣವೇ ಉತ್ತಮ ಸಮಾಜದ ಬುನಾದಿ. ಪ್ರತಿಯೊಬ್ಬ ಮಕ್ಕಳು ನುರಿತ ನಾಗರಿಕರಾಗಲು ಗುಣಮಟ್ಟದ ಶಿಕ್ಷಣ ಅಗತ್ಯ," ಎಂದು ಹೇಳಿದರು.ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಲವಾರು ಶಿಕ್ಷಣಾಧಿಕಾರಿಗಳು, ಶಿಕ್ಷಕರು ಹಾಗೂ ಪಾಲಕರು ಭಾಗವಹಿಸಿದ್ದರು.

Author:

...
Keerthana J

Copy Editor

prajashakthi tv

share
No Reviews