BANAGALORE : ನೀರಿನ ಬಾಟಲ್‌ ಸೇರಿದಂತೆ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ಬ್ಯಾನ್‌

BANAGALORE NEWS : ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ (Muzrai Department) ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ (Plastic) ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ (Plastic Free Temple) ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಸೂಚಿಸಿದರು.

ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು. 

Author:

...
Keerthana J

Copy Editor

prajashakthi tv

share
No Reviews